ಪುಟ:ಪರಂತಪ ವಿಜಯ ೨.djvu/೭೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೬೨

ಪರಂತಪ ವಿಜಯ



ಶಂಬರ- ನಾನು, ಪರಂತಪನಿಗೆ ಪ್ರತೀಕಾರವನ್ನು ಮಾಡದೆ ಎಂದಿಗೂ ಬಿಡತಕ್ಕವನಲ್ಲ. ನಾಳೆಯೇ ಅವನನ್ನು ಕಲಹಕ್ಕಾಗಿ ಕರೆದು, ಅವನೊಡನೆ ಯುದ್ಧವನ್ನು ಮಾಡುವೆನು. (ಪೂರ್ವ ಕಾಲದಲ್ಲಿ, ವಾದಿ ಪ್ರತಿವಾದಿಗಳಲ್ಲಿ ನ್ಯಾಯವು ಯಾರ ಪಕ್ಷವಾಗಿದೆಯೆಂಬುದನ್ನು ಪರೀಕ್ಷಿಸುವುದಕ್ಕಾಗಿ, ಇಬ್ಬರು ಪಂಚಾಯಿತರ ಮುಂದೆ ದ್ವಂದ್ವ ಯುದ್ಧವನ್ನು ಮಾಡಿ ಅದರಲ್ಲಿ ಗೆದ್ದವನ ಪಕ್ಷವು ನ್ಯಾಯವೆಂದೂ ಸೋತವನದು ಅಧರ್ಮವೆಂದೂ ನಿರ್ಣಸುತ್ತಿದ್ದರು)
ಸುಮಿತ್ರ- ಇದು ಅಪಾಯಕರವಾದುದು. ನೀನು ಬಲಿಷ್ಟನಾದರೂ ಅವನನ್ನು ಸೋಲಿಸಲಾರೆ. ಹಾಗೂ ಆಗಲಿ; ನೀನು ಯಾವ ರೀತಿಯಲ್ಲಿ ಅವನನ್ನು ಸೋಲಿಸಬೇಕೆಂದು ಯೋಚಿಸಿರುತ್ತೀಯೆ?
ಶಂಬರ-ಪಿಸ್ತೂಲಿನಿಂದ ಸುಟ್ಟು ಅವನನ್ನು ಕೊಂದುಬಿಡುವೆನು.
ಸುಮಿತ್ರ- ಪಿಸ್ತೂಲನ್ನು ಉಪಯೋಗಿಸುವುದರಲ್ಲಿ ಅವನಿಗಿಂತ ನೀನು ಸಮರ್ಥನೋ ?
ಶಂಬರ - ಅವನು ಮಾತ್ರವೇ ಅಲ್ಲ. ಈ ವಿಷಯದಲ್ಲಿ ಯಾರೂ ನನಗೆ ಎದುರಿಲ್ಲ.
ಸುಮಿತ್ರ- ಪರಂತಪನು ಸರಕಾರದಿಂದ ಹೊಂದಿರುವ ಸನ್ನದಿನ ವಿಷಯವನ್ನು ನಾನು ಮೊದಲೇ ತಿಳಿಸಿರುತ್ತೇನಷ್ಟೆ ! ನಾನಾವಿಧವಾದ ಆಯುಧಗಳ ಉಪಯೋಗದಲ್ಲಿ ಅದ್ವಿತೀಯವಾದ ಪಾಂಡಿತ್ಯವಿದ್ದ ಹೊರತು, ಇಂಥ ಅಧಿಕಾರವನ್ನು ಎಂದಿಗೂ ಕೊಡಲಾರರು.
ಶಂಬರ- ಅವನು ಒಳ್ಳೆಯ ಪಂಡಿತನಾಗಿಯೇ ಇರಬಹುದು; ಆದರೆ ನನ್ನ ಸಾಮರ್ಥ್ಯವೂ ಸರಕಾರದವರಿಗೆ ಚೆನ್ನಾಗಿ ತಿಳಿದಿರುವುದು. ಅವನಿಗಿಂತಲೂ ಹೆಚ್ಚಾದ ಅಧಿಕಾರವನ್ನು ಸರಕಾರದವರು ಕಾಲಕ್ರಮೇಣ ನನಗೂ ಕೊಡಬಹುದು.
ಸುಮಿತ್ರ- ಎಷ್ಟು ಹೇಳಿದರೇನು? ಪರಂತಪನ ಕಡೆಗೆ ನ್ಯಾಯವಿರುವುದು. ಉಯಿಲಿನ ಪ್ರಕಾರ ಅವನು ಮಾಧವನ ಆಸ್ತಿಯನ್ನು ಅಪೇಕ್ಷಿಸುವನು. ಕಾಮಮೋಹಿನಿಗೂ ಈತನಲ್ಲಿ ಅನುರಾಗ ವಿಶೇಷ ವುಂಟಾದುದರಿಂದಲೇ, ಅವಳು ಆತನಿಗೆ ಸ್ವಾಧೀನಳಾಗಿರುವಳು. ಅವಳಿಗೆ ನಿನ್ನಲ್ಲಿ