ಪುಟ:ಪರಂತಪ ವಿಜಯ ೨.djvu/೯೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೮೬

ಪರಂತಪ ವಿಜಯ


ಶಂಬರ - ಹಾಗೋ? ಹಾಗಾದರೆ ನಿನ್ನನ್ನು ಕೊಲ್ಲುವುದಕ್ಕಿಂತ, ಜೀವಚ್ಛವವನ್ನಾಗಿ ಮಾಡಿ ಹಿಂಸಿಸುವುದೇ ನನಗೆ ಆಪ್ಯಾಯನಕರವಾದುದು. ಎಲೈ ಅರ್ಥಪರನೆ! ನೀನು ಈ ಕರಾಳನ ಸಹಾಯದಿಂದ ಇವನನ್ನು ಕಾರಾಗೃಹಕ್ಕೆ ಸೇರಿಸು. (ಎಂದು ಹೇಳಿ, ತಾನು ವಿಶ್ರಮಾರ್ಥವಾಗಿ ಹೊರಟು ಹೋದನು. ಅವರಿಬ್ಬರೂ ಇವನನ್ನು ಕಾರಾಗೃಹಕ್ಕೆ ಸೇರಿಸಿ ಬೀಗ ಹಾಕಿಕೊಂಡು ಬರುವಷ್ಟರಲ್ಲಿ ಪುನಃ ಅಲ್ಲಿಗೆ ಬಂದು) ಎಲಾ! ದುರಾತ್ಮನಾದ ಪರಂತಪನೆ! ಈ ಛಡಿಯೇಟುಗಳೂ ಕಾರಾಗೃಹವಾಸವೂ ನಿನಗೆ ಯೋಗ್ಯ ವಾದುವಲ್ಲ. ಈಗಲೂ ನನ್ನ ಪ್ರಿಯಳನ್ನು ನನ್ನ ವಶಕ್ಕೆ ಒಪ್ಪಿಸಿ ನೀನು ಈ ದೇಶವನ್ನೇ ಬಿಟ್ಟು ಹೊರಟು ಹೋಗುವುದಾಗಿ ಒಪ್ಪಿದರೆ, ನೀನು ನಿರಾತಂಕವಾಗಿ ಜೀವಿಸಿಕೊಂಡಿರಬಹುದು; ಇಲ್ಲದಿದ್ದರೆ ನಿನಗೆ ಬಂಧವಿಮೋ ಚನೆಯಾಗಲಾರದು. ಏನು ಹೇಳುತ್ತೀಯೆ?

ಪರಂತಪ- ನನಗೆ ಬಂಧವಿಮೋಚನೆಯಾದರೆ, ನಿನ್ನನ್ನು ಜೀವ ಸಹಿತವಾಗಿ ಬಿಡುವೆನೆ? ನಿನ್ನ ತಲೆಯನ್ನು ಸಹಸ್ರಭಾಗವಾಗಿ ಛೇದಿಸುವೆನು.

ಶಂಬರ-ಹಾಗಿದ್ದರೆ, ನಿನಗೆ ಈ ಬಂಧನವು ತಪ್ಪತಕ್ಕದ್ದಲ್ಲ. ಎಲೈ ಅರ್ಥಪರನೇ ! ಈತನ ಕೈಕಾಲುಗಳ ಸಂಕಲೆಯನ್ನು ಬಿಡಿಸು, ಕರಾಳನೇ! ಇವನು ಈ ಕಬ್ಬಿಣದ ಸಲಾಕಿಗಳಿಗೆ ಕೈಹಾಕಿದರೆ ಇವನ ಕೈಬೆರಳುಗಳನ್ನು ಕತ್ತರಿಸಿಬಿಡುವಂತೆ ಯಾಯಿಕರಿಗೆಲ್ಲಾ ಹೇಳು. ಎಲಾ ಪರಂತಪ! ಜೋಕೆ! ವಿಧೇಯನಾಗಿರು!! ಅವಿಧೇಯತೆಯನ್ನು ತೋರಿಸಿದರೆ ಕೇಡಿಗೆ ಗುರಿಯಾಗುವೆ!!!

ಪರಂತಪ- ಎಲೆ ನೀಚನೇ! ಸಾಯುವುದಕ್ಕೆ ಅಂಜುವ ಹೇಡಿಗಳಿಗೆ ಈ ಭಯೋತ್ಪಾತವನ್ನುಂಟುಮಾಡು; ಹೋಗು. ಇಷ್ಟು ಮಾತ್ರಕ್ಕೆ ಏಕೆ ಹಿಗ್ಗುವೆ ? ಕ್ಷಿಪ್ರದಲ್ಲಿಯೇ ತಕ್ಕ ಫಲವನ್ನು ಅನುಭವಿಸುವೆ.

ಇದನ್ನು ಕೇಳಿ, ಅರ್ಥಪರ ಶಂಬರರಿಬ್ಬರೂ ನಗುತ್ತ ಹೊರಟು ಹೋದರು. ಪರಂತಪನು ಕಾರಾಗೃಹದಲ್ಲಿ ತನ್ನ ದುರದೃಷ್ಟಕ್ಕೂ ಅರ್ಥಪರನ ಮೋಸಕ್ಕೂ ಚಿಂತಿಸುತ್ತಿದ್ದನು.
  ಮಾರನೆಯ ದಿವಸ, ಪರಂತಪನು ತಪ್ಪಿಸಿಕೊಳ್ಳುವುದಕ್ಕೆ ಅವಕಾಶವಿಲ್ಲದಂತೆ ರತ್ನಾಕರದಲ್ಲಿ ಕಾವಲು ಇಟ್ಟು, ಅರ್ಥಪರನಿಗೆ ಮೇಲುವಿಚಾರ