ಪುಟ:ಬಸವಣ್ಣನವರ ವಚನಸಂಪುಟ - ೧.pdf/೧೨

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಎರಕಗೊಂಡಿವೆ. ಹೀಗಾಗಿ ಸಮಗ್ರ ಕರ್ನಾಟಕದ ಪ್ರಾತಿನಿಧಿಕ ಧ್ವನಿಯೆನಿಸಿದ ಈ ಸಾಹಿತ್ಯದ ಪ್ರಕಟನೆಯು ತನ್ನ ಕರ್ತವ್ಯದ ಭಾಗವೆಂದು ಭಾವಿಸಿರುವ ಕರ್ನಾಟಕ ಸರ್ಕಾರ, ಅದನ್ನು ಸುಲಭ ಬೆಲೆಯಲ್ಲಿ ಜನತೆಗೆ ನೀಡುತ್ತಿದೆ.

ಈ ಯೋಜನೆಯ ನೇತೃತ್ವ ವಹಿಸಿ ದುಡಿದ ಡಾ. ಎಂ. ಎಂ. ಕಲಬುರ್ಗಿ ಅವರ ಶ್ರದ್ಧೆಯನ್ನು, ಸಂಪಾದಕ ಮಂಡಳಿಯ ಮಾರ್ಗದರ್ಶನವನ್ನು, ಸಂಪಾದಕರ ಶ್ರಮವನ್ನು ಸ್ಮರಿಸುತ್ತ, ಈ ಐತಿಹಾಸಿಕ ಪ್ರಕಟನೆಯ ಪರಿಷ್ಕೃತ ದ್ವಿತೀಯ ಆವೃತ್ತಿ ಸಂಪುಟಗಳನ್ನು ಕನ್ನಡ ಜನತೆಗೆ ಅರ್ಪಿಸುತ್ತೇನೆ.