ಪ್ರಕಾಶಕರ ಮಾತು
ನಾನು ಮನೋಹರ ಗ್ರಂಥಮಾಲೆಯ ಸಂಪಾದಕರಾದ ಶ್ರೀ. ಜಿ. ಬಿ. ಜೋಶಿಯವರ ಸಹಾಯದಿಂದ ದಿವಂಗತ ಕೆರೂರ ವಾಸುದೇವಾಚಾರ್ಯರು ಬರೆದ ಸಾಹಿತ್ಯವನ್ನೆಲ್ಲ ಒಂದು ಕ್ರಮಬದ್ಧವಾದ ರೀತಿಯಲ್ಲಿ ಪುಸ್ತಕರೂಪವಾಗಿ ಪ್ರಕಟಿಸಬೇಕೆಂದೆಣಿಸಿ ಈ“ವಾಸುದೇವ ಸಾಹಿತ್ಯರತ್ನಮಾಲೆ"ಯನ್ನು ಪ್ರಾರಂಭ ಸಿದ್ದೇನೆ. ಒಂಬತ್ತು ಚಾರಿತ್ರಿಕ ಕಥೆಗಳ ಸಂಗ್ರಹವಾದ “ ಬೆಳಗಿದ ದೀಪಗಳು " ಆ ಮಾಲೆಯಲ್ಲಿಯ ಆರನೆಯ ರತ್ನ.
ನಂಜನಗೂಡಿನ ಸತಿಹಿತೈಷಿಣೀ ಗ್ರಂಥಮಾಲೆಯ ಸಂಪಾದಿಕೆಯರಾದ ಶ್ರೀಮತಿ ತಿರುಮಲಾಂಬಾ ಅವರು ದಿವಂಗತ ವಾಸುದೇವಾಚಾರ್ಯರ ಮೇಲಿನ ತಮ್ಮ ಗೌರವದಿಂದ, ತಮ್ಮಲ್ಲಿದ್ದ 'ಸಚಿತ್ರ ಭಾರತ'ದ ಮೊದಲ ಸಂಪುಟವನ್ನು ಸಮಯಕ್ಕೆ ಒದಗಿಸಿಕೊಟ್ಟು ಸಹಾಯಮಾಡಿದ್ದಾರೆ ; ಅದಕ್ಕಾಗಿ ನಾನು ಅವರಿಗೆ ಉಪಕೃತನಾಗಿದ್ದೇನೆ. ಅಲ್ಲದೆ ಈ ಮೊದಲೆ ಸಚಿತ್ರ ಭಾರತದ ಮೂರೂ ಸಂಪುಟಗಳನ್ನು ಕೊಟ್ಟು ಗ್ರಂಥಪ್ರಕಟನೆಗೆ ಸಹಾಯ ಮಾಡಿದ ಹುಬ್ಬಳ್ಳಿಯ ಶ್ರೀ ಸರಸ್ವತಿ ವಿದ್ಯಾರಣ್ಯ ವಾಚನಾಲಯದ ಸಂಚಾಲಕರಿಗೂ ಮೂರನೆಯ ಸಂಪುಟವೊಂದನ್ನು ಕೊಟ್ಟ ಶ್ರೀಮಂಗಳವೇಢ ಶ್ರೀನಿವಾಸರಾಯರಿಗೂ ನಾನು ಋಣಿಯಾಗಿದ್ದೇನೆ.
––ಧೀರೇಂದ್ರ ನಾ, ಕರೂರ