ಪುಟ:ಬೆಳಗಿದ ದೀಪಗಳು.pdf/೮

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಅರಿಕೆ

ವಾಸುದೇವಾಚಾರ್ಯರು ಆಗೀಗ ತಮ್ಮ 'ಸಚಿತ್ರ ಭಾರತ' ದಲ್ಲಿ ಈ ಕತೆಗಳನ್ನು ಬರೆದು ಪ್ರಕಟಿಸಿದರು, 'ಸಂಪೂರ್ಣಕಥೆ' ಎಂದು ಇವಕ್ಕೆ ಅವರೇ ನಾಮಕರಣ ಮಾಡಿದರು. ಅವುಗಳಲ್ಲಿ ಕಾಲ್ಪನಿಕ ಮತ್ತು ಐತಿಹಾಸಿಕ ಕಥೆಗಳದೊಂದು, ಚಾರಿತ್ರಿಕ ಕಥೆಗಳದೊಂದು, ಪತ್ತೇದಾರಿ-ಕಥೆಗಳದೊಂದು, ಸಾಮಾಜಿಕ ಕಥೆಗಳದೊಂದು ಹೀಗೆ ಬೇರೆ ಬೇರೆ ಸಂಕಲನಗಳನ್ನು ಮಾಡಿ, ಪ್ರತಿಯೊಂದು ಸಂಕಲನಕ್ಕೂ ಬೇರೆ ಬೇರೆ ಹೆಸರಿಟ್ಟು ಪ್ರಕಟಿಸಲಾಗಿದೆ. 'ಪ್ರೇಮ ವಿಜಯ' ಅವುಗಳಲ್ಲಿಯ ಮೊದಲನೆಯ ಸಂಕಲನ. 'ಬೆಳಗಿದ ದೀಪಗಳು' ಎರಡನೆಯದು. ತೊಳೆದ ಮುತ್ತು ಮೂರನೆಯದು. 'ಬೆಳ್ಳಿ ಚಿಕ್ಕೆ' ನಾಲ್ಕನೆಯದು.

ಏಕಸಮಯದಲ್ಲಿ ಈ ಗ್ರಂಥಗಳು ವಾಸುದೇವ ಸಾಹಿತ್ಯ ರತ್ನಮಾಲೆಯಲ್ಲಿ ಪ್ರಕಟವಾಗಿಯೂ, `ಮನೋಹರ ಗ್ರಂಥಮಾಲೆಯಲ್ಲಿಯ ಗ್ರಾಹಕರಿಗೂ ದೊರೆಯುವಂತಾದುದು, ಮತ್ತು ಅದಕ್ಕೆ ಅನುಕೂಲ ಮಾಡಿ- ಕೊಟ್ಟುದು ಶ್ರೀ ಧೀರೇಂದ್ರ ನಾ, ಕರೂರ ಅವರ ಸಹಕಾರ ಸಹಾಯದಿಂದ ಎಂಬದನ್ನು ಬೇರೆ ಹೇಳಬೇಕಾಗಿಲ್ಲ. ಆದಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ

- ಜಿ. ಬಿ. ಜೋಶಿ.