ವಿಷಯಕ್ಕೆ ಹೋಗು

ಪುಟ:ಮುಡಿ.pdf/೧೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ
12
ಮುಡಿ

ಅಧ್ಯಯನ - ಪರಿಶೀಲನೆಗೊದಗಿದ ಕಾವ್ಯಗಳು, ಸಾಹಿತ್ಯ, ಅನುಭವ, ಕಲ್ಪನೆ ಮೊದಲಾದ ಅನೇಕಾನೇಕ ರೂಪದ ಸಾಮಾಗ್ರಿಯನ್ನು ಅರ್ಥದಲ್ಲಿ ತಂದು ಹೊಂದಿಸಿ ಅವೆಲ್ಲವನ್ನೂ ಪ್ರಸಂಗದ ಹಂದರದಲ್ಲಿ ಸಕಾರಣವಾಗಿ ಹೊಂದಿಸುವುದು ಅರ್ಥಗಾರಿಕೆಯ ರಚನಾ ರಹಸ್ಯ" (ಪು: 109) ಎಂಬಂತಹ ಸೂತ್ರರೂಪದ ಮಾತುಗಳನ್ನು ಅವರು ಇಲ್ಲಿ ಹೇಳಿದ್ದಾರೆ. 'ಭೀಷ್ಮ ವಿಜಯ' ಪ್ರಸಂಗದಲ್ಲಿನ ಪದಗಳಿಗೆ ಅರ್ಥ ಹೇಳುವ ವಿಧಾನ ಹಾಗೂ ಅಲ್ಲಿನ ಪದಗಳನ್ನು ಅರ್ಥೈಸುವ ವಿಧಾನದ ಕುರಿತಾದ ಜೋಶಿಯವರ ಪುಟ್ಟ ಟಿಪ್ಪಣಿಯು ಅಪಾರವಾದ ಒಳನೋಟಗಳನ್ನು ಉಳ್ಳದ್ದಾಗಿದೆ. ವಾದದ ನಿರೀಕ್ಷೆಯೆಂಬುದು ಕೃತಕ ಮತ್ತು ಕಾಲಿಕ, ನೈಜವಲ್ಲ, ನ್ಯಾಯವಾದುದಲ್ಲ" ಎಂಬ ಅವರ ತೀರ್ಮಾನವು ಮನೋಜ್ಞವಾದುದು. ಹಾಗೆಯೇ 'ಅರ್ಥದಲ್ಲಿ ಪುನರಾವರ್ತನೆ'ಯ ಕುರಿತು ಅವರು ಬರೆಯುತ್ತ" - ಪುನರಾವರ್ತನೆಯ ಸಂದರ್ಭದಲ್ಲಿ ಕಲಾವಿದರು ಎಚ್ಚರವಹಿಸಿ ವಸ್ತು ನಿರ್ವಹಣೆ ಮಾಡಬೇಕು. ಅನಿವಾರ್ಯದಲ್ಲದಿರುವಲ್ಲಿ ಪೂರ್ವಕತೆಯನ್ನು ಲಂಬಿಸಬಾರದು.ಸಂಕ್ಷೇಪಗೊಳಿಸಬೇಕು. ಅಲ್ಲದೆ ಅದನ್ನು ಹೇಳುವಲ್ಲಿ ಹೇಳುವ ವಿಧಾನ,ವಿವೇಚನೆಯ ಕೋನ ಮತ್ತು ದಾರಿಗಳಲ್ಲಿ ವೈವಿಧ್ಯವನ್ನು ತರಬೇಕು" ಎಂದು ಹೇಳಿದ ಮಾತುಗಳು ಅರ್ಥಗಾರಿಕೆಗೆ ಹೊಸಹಾದಿಯನ್ನು ತೋರಿಸಬಲ್ಲಷ್ಟು ಸಶಕ್ತವಾಗಿವೆ. .

ತಮಿಳುನಾಡಿನ 'ತೆರುಕೂತ್ತು' ಕುರಿತಾದ ಪರಿಚಯ ಲೇಖನವೊಂದು ಈ ಪುಸ್ತಕದಲ್ಲಿದ್ದು ಅದು ದಕ್ಷಿಣಭಾರತದ ರಂಗಭೂಮಿಯ ಕುರಿತಾದ ನಮ್ಮ ತಿಳುವಳಿಕೆಯನ್ನು ವಿಸ್ತರಿಸುತ್ತದೆ. ಅಮೃತಸೋಮೇಶ್ವರರ 'ಯಕ್ಷಗಾನ ಕೃತಿ ಸಂಪುಟ' ಮತ್ತು 'ಯಕ್ಷಾಂದೋಳ'ದ ಬಗ್ಗೆ ಬರೆದಿರುವ ಎರಡು ಲೇಖನಗಳು ಆ ಕೃತಿಗಳ ಮಹತ್ತ್ವವನ್ನು ಸಾಧಾರವಾಗಿ ಮುಂದಿಡುತ್ತವೆ."ಸಮನ್ವಯ ದೃಷ್ಟಿ, ಗಂಭೀರವಾದ ದೃಷ್ಟಿ ಕೋನ, ಪರಂಪರೆಯ ಪರಿಜ್ಞಾನ, ಹೊಸ ಆಶಯದ ಕನಸು, ಅಸಾಧಾರಣ ಭಾಷಾ ಸೌಂದರ್ಯಗಳಿಂದ ಅಮೃತರು ಆಧುನಿಕ ಯುಗದ ಅತ್ಯಂತ ಮಹತ್ತ್ವದ ಯಕ್ಷಗಾನ ಕವಿ" (ಪುಟ: 144) ಎಂಬ ಅವರ ನಿರ್ಣಯಗಳು ಅವರ ಆಳವಾದ ಅಧ್ಯಯನ, ಪರಂಪರೆಯ ಬಗ್ಗೆ ತಿಳುವಳಿಕೆ ಮತ್ತು ಆಧುನಿಕತೆಯ ಬಗೆಗೆ ತೆರೆದ ಮನಸ್ಸಿನಿಂದ ಪ್ರತೀತಗೊಂಡಿದೆ.


ಪುಸ್ತಕದ ಕೊನೆಯಲ್ಲಿ ಇಲ್ಲಿನ ಲೇಖನಗಳನ್ನು ಬರೆದಿರುವ ಸಂದರ್ಭದಬಗ್ಗೆ ಲೇಖಕರು ಒಂದು ಸೂಚಿಯನ್ನು ಕೊಟ್ಟಿದ್ದಾರೆ. ಇದನ್ನು ಸೂಕ್ಷ್ಮವಾಗಿ ಪರಿಶೀಲಿಸಿದರೆ.ಇಲ್ಲಿನ ಲೇಖನಗಳು ಯಕ್ಷಗಾನ ಪ್ರದರ್ಶನಗೊಳ್ಳುತ್ತಿರುವ ಭೌಗೋಳಿಕ ಆವರಣದೊಳಗಡೆಗೇ ಸಿದ್ಧಗೊಂಡ ಅಥವಾ ಮಂಡಿಸಲಾದ ಒಂದು ಚಿತ್ರ ದೊರೆಯುತ್ತದೆ. ಅಂದರೆ ಯಾರಿಗೆ ಯಕ್ಷಗಾನ 'ಗೊತ್ತಿದೆಯೋ' ಅವರಿಗೇ ಯಕ್ಷಗಾನದ ಬಗ್ಗೆ ತಿಳಿಸಿ ಹೇಳುವ ಪ್ರಯತ್ನವಿದು. ಹೀಗಾಗಿ ಇಲ್ಲಿನಬರಹಗಳಿಗೆ 'ಸಂಕ್ಷಿಪ್ತತೆ' ಒದಗಿ ಬಂದ ಗುಣವಾಗಿದೆ. ಎಷ್ಟೋ ಪರಿಭಾಷೆಗಳನ್ನು ವಿವರಿಸಬೇಕಾದ

• ಡಾ. ಎಂ. ಪ್ರಭಾಕರ ಜೋಶಿ