ಪುಟ:ಯಶೋಧರ ಚರಿತೆ.pdf/೧೦೩

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು
ಈ ಪುಟವನ್ನು ಪ್ರಕಟಿಸಲಾಗಿದೆ

ಯಶೋಧರ ಚರಿತೆ

೯೧

ಕಡೆಗಣ್ಗಳ್ ಕೇದಗೆಯಂ
ಪಡೆದುವು ಮಲ್ಲಿಗೆಗೆ ಸೆಳ್ಳುಗುರ್ ಸಂಪಗೆಯಂ
ಪಡೆದುವು ಪಾದರಿಗೆನೆ ಸಂ-
ಗಡರಿಂದಲರ್ಗೊಯ್ವ ವಾರವನಿತೆಯರೆಸೆದರ್


ಮಳಯಜದ ಮೊಲೆಯ ಕುಂಕುಮ-
ದಳಕದ ಕತ್ತುರಿಯ ಬಣ್ಣವಣ್ಣಿಗೆ ಕೊಳದೊಳ್
ತಳರ್ದಿರೆ ಜಲರುಹಮುಖಿಯರ್
ಜಳಕೇಳಿಯ ನೆವದಿ ದೂಳಿಚಿತ್ರಂ ಬರೆದರ್


ತೆರೆಮುಗಿಲನಡರ್ವ ವಿದ್ಯಾ-
ಧರಿಯೆಂಬಿನಮೊರ್ವಳೇರೆ ಕೃತಕಾದ್ರಿಯನೇಂ
ದೊರೆಯಾದಳೊ ರತಿನಾಥನ
ಕರುಮಾಡದ ಮದನಮೋಹಿನೀ ಪುತ್ರಿಕೆವೊಲ್



೭. ಅಲ್ಲಿ ವಾರವನಿತೆಯರು ಹೂ ಕೊಯ್ಯುವ ಸೊಗಸೇ ಸೊಗಸು. ಅವರ
ಕಡೆಗಣ್ಣುಗಳು ಮಲ್ಲಿಗೆಗೆ ಕೇದಗೆಯನ್ನು ಜತೆಗೊಳಿಸಿದುವು. ಪಾದರಿಗೆ ಅವರ
ಸೆಳ್ಳುಗುರು ಸಂಪಗೆಯನ್ನು ಒಂದುಗೂಡಿಸಿತು. ೮. ಕೆಲವರು ಕಮಲ ಮುಖಿಯರು
ಅಲ್ಲಿ ನೆವಕ್ಕೆ ನೀರಾಟವಾಡುತ್ತಾ ಇದ್ದರು. ನಿಜವಾಗಿ ನೋಡಿದರೆ ಅವರು
ಕುಚಗಳಿಗೆ ಲೇಪಿಸಿಕೊಂಡ ಗಂಧ, ಮುಂಗುರುಳಿಗೆ (ಬೈತಲೆಗೆ) ಹಚ್ಚಿದ ಕುಂಕುಮ,
ಕೆನ್ನೆಗೆ ಹಾಕಿದ ಕಸ್ತೂರಿಯ ಚಿತ್ರಾಲಂಕಾರ-ಇವುಗಳ ಬಗೆಬಗೆಯ ಬಣ್ಣಗಳಿಂದ
ನೀರಮೇಲೆ ರಂಗವಲ್ಲಿಯನ್ನು ಬಿಡಿಸುವಂತೆ ಭಾಸವಾಗುತ್ತಿತ್ತು. ೯. ತೆರೆದ
ಮುಗಿಲನ್ನೇರಿ ಹೋಗುವ ವಿದ್ಯಾಧರಿಯಂತೆ ಒಬ್ಬಳು ಅಲ್ಲಿದ್ದ
ಕೃತಕಗಿರಿಯನ್ನೇರಿದಳು. ಆಗ ಆವಳು ಕಾಮೇಶ್ವರನ ಅರಮನೆಯ ಮದನಕೈ
ಬೊಂಬೆಯಂತೆ ಬಹಳ ಚೆಲುವಾಗಿ ತೋರುತ್ತಿದ್ದಳು.