ಪುಟ:ಯಶೋಧರ ಚರಿತೆ.pdf/೪೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಯಶೋಧರ ಚರಿತೆ

೨೯

ಮುನಿಸಮುದಾಯಸಮೇತಂ
ವಿನೇಯಜನ ವನಜವನದಿವಾಕರನಂತಾ
ಮುನಿಪನುಪವಾಸಮಂ ಪ-
ರ್ವ ನಿಮಿತ್ತಂ ಕಳೆದು ಬಳಿಕ ಬಾಲಕಯುಗಮಂ ೪೬

ಚರಿಗೆಗೆ ಬೀಳ್ಕೊಡೆ ಗುರುಗಳ
ಚರಣಕ್ಕಾ ಯುಗಳಮೆರಗಿ ಪೋರಮಟ್ಟಾಗಳ್
ತರುಣ ವನಹರಿಣಯುಗಮಂ
ತರಕ್ಷು ಪಿಡಿವಂತೆ ಚಂಡಕರ್ಮಂ ಪಿಡಿದಂ ೪೭

ಅಭಯರುಚಿಯಭಯಮತಿಯೆಂ-
ಬುಭಯಮನಾ ಪಾಪಕರ್ಮನುಯ್ವೆಡೆಯೊಳ್ ಮ
ತ್ತಭಯರುಚಿ ತಂಗೆಗೆಂದಪ
ನಭೀತೆಯಾಗೆಲಗೆ ತಾಯೆ ಮರಣದ ದೆಸೆಯೊಳ್ ೪೮


೪೫. ಅವರ ಗುಣ, ಅವರ ಮನೋನಿಗ್ರಹ, ಅವರ ತಪಶ್ಚರಣ ಎಂಬವುಗಳು
ಅಂತಿಂಥ ಸಾಮಾನ್ಯರಿಗೆ ಅಳವಡುವಂತಹವಲ್ಲ. ಅವರ ಹೆಸರನ್ನು ಹೇಳಿದರೆ
ಸಾಕು, ಆ ನಾಲಗೆಗೆ ತಾಯಿಯ ಮೊಲೆಹಾಲು ಕೂಡ ಸವಿಯಾಗಲಾರದು.೨೦.
೪೬. ತಾವರೆಗಳನ್ನರಸುವ ಸೂರ್ಯನಂತೆ ಸುದತ್ತಾಚಾರ್ಯರು ಶಿಷ್ಯವೃಂದದ
ವಿಕಾಸಕ್ಕೆ ಕಾರಣವಾಗಿದ್ದರು. ಅವರು ಈ ಮುನಿಗಳ ಸಮುದಾಯವನ್ನು
ಕೂಡಿಕೊಂಡು, ವ್ರತದ ಅಂಗವಾಗಿ ಉಪವಾಸವನ್ನು ಮಾಡಿದರು. ಆನಂತರ
ಇಬ್ಬರು ಮಕ್ಕಳನ್ನು ಕರೆದು ಭಿಕ್ಷೆಯೆತ್ತಿ ತರುವಂತೆ ಕಳುಹಿಸಿಕೊಟ್ಟರು. ೪೭. ಆ
ಬಾಲಕರು ಗುರುಗಳ ಪಾದಕ್ಕೆ ನಮಸ್ಕರಿಸಿ ಅಲ್ಲಿಂದ ಹೊರಟರು. ಅಷ್ಟರಲ್ಲೇ
ಎರಡು ಎಳೆಯ ಜಿಂಕೆ ಮರಿಗಳನ್ನು ಹುಲಿಯು ಹಿಡಿಯುವಂತೆ, ಅವರನ್ನು
ಚಂಡಕರ್ಮನು ಹಿಡಿದನು. ೪೮. ಅಭಯರುಚಿ ಮತ್ತು ಅಭಯಮತಿ ಎಂಬ