ಪುಟ:ಯಶೋಧರ ಚರಿತೆ.pdf/೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಅಧ್ಯಕ್ಷರ ಮಾತು

ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕನ್ನಡದ
ಮೇರುಕೃತಿಗಳನ್ನು ಪುನರ್‌ಮುದ್ರಣ ಮಾಡಲು ಒಂದು ಯೋಜನೆಯನ್ನು
ಕೈಗೊಂಡಿತು. ಕೃತಿಗಳ ಆಯ್ಕೆಗಾಗಿ ಸರ್ಕಾರವು ಒ೦ದು ಸಮಿತಿಯನ್ನು ರಚಿಸಿತು.
ಈ ಮಹತ್ವದ ಯೋಜನೆಯ ಸಮಿತಿಯ ಅಧ್ಯಕ್ಷನಾಗಿ ಕಾರ್ಯನಿರ್ವಹಿಸುವ
ಸುಯೋಗ ನನ್ನದಾಯಿತು.
ಈ ಯೋಜನೆಯ ಮಹತ್ವವನ್ನು ನಾನು ವಿವರಿಸುವ ಅಗತ್ಯವಿಲ್ಲ. ಕನ್ನಡದ
ಶ್ರೇಷ್ಠ ಕೃತಿಗಳನ್ನು ಸುಲಭ ಬೆಲೆಗೆ ಕನ್ನಡಿಗರ ಕೈಗಳಲ್ಲಿರಿಸಲು ಕನ್ನಡ ಮತ್ತು
ಸಂಸ್ಕೃತಿ ಇಲಾಖೆಯು ಹಲವು ಯೋಜನೆಗಳನ್ನು ಕೈಗೊಂಡಿರುವುದಕ್ಕಾಗಿ
ಸರ್ಕಾರವನ್ನೂ ಇಲಾಖೆಯನ್ನೂ ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ. ಕನ್ನಡ
ಸಂಸ್ಕೃತಿಗೆ ಈ ಯೋಜನೆಗಳು ಮಹತ್ವದ ಕೊಡುಗೆಯನ್ನು ನೀಡುತ್ತವೆ.
ಕನ್ನಡದ ಮೇರುಕೃತಿಗಳನ್ನು ಆರಿಸುವುದು ಸುಲಭದ ಕೆಲಸವಲ್ಲ. ಇಂತಹ
ಆಯ್ಕೆಯಲ್ಲಿ ಬೇರೆ ಬೇರೆ ಅಭಿಪ್ರಾಯಗಳಿಗೆ ಸಾಧಾರವಾಗಿಯೇ ಅವಕಾಶವಿರುತ್ತದೆ.
ಕನ್ನಡ ನಾಡಿನ ಶ್ರೇಷ್ಠ ಸಾಹಿತಿಗಳು ಈ ಸಮಿತಿಯ ಸದಸ್ಯರಾಗಿದ್ದದ್ದು ಸುದೈವದ
ಸಂಗತಿ. ಕೃತಿಗಳನ್ನು ಚರ್ಜೆಸಿ ಮಹತ್ವದ ನಿರ್ಧಾರಕ್ಕೆ ಬಂದ ಸಮಿತಿಯು
ಕಷ್ಟಸಾಧ್ಯವಾದ ಕಾರ್ಯವನ್ನು ಸಾಧಿಸಿದೆ. ಇದಕ್ಕಾಗಿ ನಾನು ಸಮಿತಿಯ ಎಲ್ಲ
ಸದಸ್ಯರಿಗೂ ಕೃತಜ್ಞನಾಗಿದ್ದೇನೆ.
ಈ ಕಾರ್ಯದ ನಿರ್ವಹಣೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ
ನಿರ್ದೇಶಕರಾದ ಶ್ರೀ ಮನು ಬಳಿಗಾರ್‌ ಅವರು ನೆರವಾಗಿದ್ದಾರೆ. ಅವರ ಮತ್ತು
ಅವರ ಸಿಬ್ಬಂದಿಯವರ ಅಮೂಲ್ಯ ಸಹಕಾರಕ್ಕೆ ನಾನು ಕೃತಜ್ಞ.
ಕನ್ನಡ ನಾಡಿನ ಮನೆಮನೆಗಳಲ್ಲಿ ಸಾಹಿತ್ಯದ ಮಂಗಳ ದೀಪದ ಬೆಳಕನ್ನು
ಹರಡುವ ಈ ಯೋಜನೆಯ ಪೂರ್ಣಪ್ರಯೋಜನವನ್ನು ಕನ್ನಡಿಗರು ಪಡೆದುಕೊಳ್ಳಲಿ
ಎಂದು ಹಾರೈಸುತ್ತೇನೆ.

ದಿನಾಂಕ ೧೬.೧೨.೨೦೧೦

ಸಿರಿಗನ್ನಡಂ ಗೆಲ್ಗೆ!

ಎಲ್‌.ಎಸ್‌. ಶೇಷಗಿರಿ ರಾವ್‌

ಅಧ್ಯಕ್ಷ

ಕನ್ನಡದ ಮೇರುಕೃತಿಗಳ ಆಯ್ಕೆ ಸಮಿತಿ