ಎರಡು ನುಡಿ
ಕರ್ನಾಟಕ ಸರ್ಕಾರವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ
“ವಿಶ್ವ ಕನ್ನಡ ಸಮ್ಮೇಳನ'ದ ಅಂಗವಾಗಿ ಕನ್ನಡದ ಮೇರುಕೃತಿಗಳ ಮರುಮುದ್ರಣ
ಯೋಜನೆಯಡಿ ಕನ್ನಡ ಸಾರಸ್ವತ ಲೋಕವನ್ನು ಶ್ರೀಮಂತಗೊಳಿಸಿರುವ ಸಾಹಿತಿಗಳ
ಮಹತ್ವದ ಕೃತಿಗಳನ್ನು ಓದುಗರಿಗೆ ಒದಗಿಸಬೇಕೆಂಬ ಸದಾಶಯ ಹೊಂದಿರುತ್ತದೆ.
ಈ ಯೋಜನೆಯಡಿ ಸುಮಾರು ೧೦೦ ಕೃತಿಗಳನ್ನು ಪ್ರಕಟಿಸಲು ಉದ್ದೇಶಿಸಿದೆ.
ಈ ಕೃತಿಗಳನ್ನು ಆಯ್ಕೆಮಾಡಲು ಖ್ಯಾತ ವಿದ್ವಾಂಸರಾದ ಪ್ರೊ. ಎಲ್.ಎಸ್.
ಶೇಷಗಿರಿರಾವ್ರವರ ಅಧ್ಯಕ್ಷತೆಯಲ್ಲಿ ನಾಡಿನ ಹೆಸರಾಂತ ಸಾಹಿತಿ /
ವಿದ್ವಾಂಸರುಗಳನ್ನೊಳಗೊಂಡ ಆಯ್ಕೆ ಸಮಿತಿಯನ್ನು ರಚಿಸಿದೆ. ಈ ಆಯ್ಕೆ
ಸಮಿತಿಯು ಕನ್ನಡದ ಮೇರುಕೃತಿಗಳ ಮರುಮುದ್ರಣ ಯೋಜನೆಗೆ ಕನ್ನಡ ಸಾಹಿತ್ಯದ
ವಿವಿಧ ಕಾಲಘಟ್ಟಗಳಲ್ಲಿ ಬಂದ ಪ್ರಾತಿನಿಧಿಕ ಕೃತಿಗಳನ್ನು ಆಯ್ಕೆ ಮಾಡಿರುತ್ತದೆ.
ಆಯ್ಕೆ ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸರ್ಕಾರದ ಪರವಾಗಿ ವಂದನೆಗಳು
ಸಲ್ಲುತ್ತವೆ. ಈ ಪುಸ್ತಕಗಳನ್ನು ಹೊರತರಲು ಅನುಮತಿ ನೀಡಿ ಸಹಕರಿಸಿದ ಎಲ್ಲಾ
ಲೇಖಕರು ಹಾಗೂ ಹಕ್ಕುದಾರರುಗಳಿಗೆ ನನ್ನ ಕೃತಜ್ಞತೆಗಳು ಸಲ್ಲುತ್ತವೆ. ಕನ್ನಡದ
ಮೇರುಕೃತಿ ಸಾಹಿತ್ಯ ಮಾಲಿಕೆಯನ್ನು ಓದುಗರು ಸ್ವಾಗತಿಸುತ್ತಾರೆಂದು ನಂಬಿದ್ದೇನೆ.
ಸರ್ಕಾರದ ಕಾರ್ಯದರ್ಶಿಗಳು