ಪುಟ:ಶ್ರೀರಾಮಕೃಷ್ಣ ಪರಮಹಂಸರ ಚರಿತೆ.djvu/೬೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ



ಆರನೆಯ ಅಧ್ಯಾಯ

ಸಾಧನಗಳು ; ಮೊದಲನೆಯಭಾಗ : 1855-1858.

ಪರಮಹಂಸರು ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡ

ರಾಗಿ ಬಹುಮಟ್ಟಿಗೆ ರಾಮಕುಮಾರನ ಲಾಲನೆಪಾಲನೆಗಳಲ್ಲಿಯೇ ಬೆಳೆದಿದ್ದರು. ಆದ್ದರಿಂದ ಪಿತೃ ಸಮಾನವಾದ ಅಣ್ಣನು ದೇಹಒಟ್ಟ ಸುದಿಯನ್ನು ಕೇಳಿ ಅವರಿಗೆ ಹಿಡಿಯಲಾರದಷ್ಟು ದುಃಖವಾಯಿತ.. ಈ ಜಗತ್ತಿನಲ್ಲಿ ಸಮಸ್ತವೂ ಅನಿತ್ಯವೆಂಬುದು ಮನಸ್ಸಿಗೆ ಮತ್ತಷ್ಟು ನಾಟಿತು. ಜಗದಂಬೆಯಲ್ಲಿ ಭಕ್ತಿಯ ಪೂಜೆಯಲ್ಲಿ ಆಸಕ್ತಿಯ ಹೆಚ್ಚಾದುವು. ಇಲ್ಲಿಂದಮುಂದಕ್ಕೆ ಶಾಸ್ತ್ರೀಯವಾಗಿ ದೇವೀ ಪೂಜೆ ಮಾಡಿದಮೇಲೆ ದೇವಿಯ ಎದುರಿಗೆ ತನ್ಮಯರಾಗಿ ಕುಳಿತು ಹೊತ್ತು ಕಳೆಯುತ್ತಿದ್ದರು. ಆಗಾಗ ರಾಮಪ್ರಸಾದ ಮುಂತಾದ ದಾಸರ ಕೀರ್ತನೆಗಳನ್ನು ಹಾಡುತ್ತ ಹಾಡುತ್ತ ಕೇವಲ ವ್ಯಾಕುಲ ಹೃದಯ ರಾಗಿ `ತಾಯಾ, ನೀನು ರಾಮಪ್ರಸಾದರಿಗೆ ದರ್ಶನಕೊಟ್ಟೆ ; ನನಗೆ ಯಾಕೆ ದರ್ಶನಕೊಡುವುದಿಲ್ಲ ? : ನಾನು ಧನ, ಜನ, ಭೋಗ, ಸುಖ ಇವುಗಳಾವುದನ್ನೂ ಅಪೇಕ್ಷಿಸುವುದಿಲ್ಲ. ನನಗೆ ದರ್ಶನ ವನ್ನು ಕೊಡು " ಎಂದು ಪ್ರಾರ್ಥಿಸುವರು. ಆಗ ಅವರ ಕಣ್ಣೀರಿಂದ ಎದೆಯು ತೊಯ್ದು ಹೋಗುತ್ತಿತ್ತು. ಹೀಗೆ ಕಾತರರಾಗಿ ಅತ್ಯ ಮೇಲೆ ಹೃದಯದ ಭಾರವು ಕಡಿಮೆಯಾಗಿ ಪುನಃ ಕೀರ್ತನೆ ಹೇಳು ವುದಕ್ಕೆ ಮೊದಲು ಮಾಡುತ್ತಿದ್ದರು.

ಮಧ್ಯಾಹ್ನದಲ್ಲಿಯೂ ಸಾಯಂಕಾಲದಲ್ಲಿಯೂ ದೇವಸ್ಥಾನದ

ಬಾಗಿಲುಹಾಕಿದಮೇಲೆ ಹತ್ತಿರದಲ್ಲಿದ್ದ ಒಂದು ನಿರ್ಜನವಾದ ಕಾಡಿಗೆ ಹೋಗಿ ದೇವಿಯ ಧ್ಯಾನದಲ್ಲಿ ಮಗ್ನರಾಗಿರುತ್ತಿದ್ದರು. ಹೃದಯನು ಅವರ ಜೊತೆಯಲ್ಲಿಯೇ ಯಾವಾಗಲೂ ಇರುತ್ತಿದ್ದನೆಂದು ಹಿಂದೆ