ಪುಟ:ಶ್ರೀರಾಮಕೃಷ್ಣ ಪರಮಹಂಸರ ಚರಿತೆ.djvu/೭೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ



ಶ್ರೀ ರಾಮಕೃಷ್ಣ ಪರಮಹಂಸರ

೫೪

ದೆಂದೂ ಹೇಳಿಕಳುಹಿಸಿದನು, ಅದರಂತೆ ಕೆಲವು ದಿನಗಳಾದ ಮೇಲೆ ಯಾರಿಗೂ ತಿಳಿಸದೆ ಒ೦ದುದಿನ ಪೂಜಾಕಾಲಕ್ಕೆ ದೇವ ಸ್ಥಾನಕ್ಕೆ ಬಂದು ಸ್ವಲ್ಪ ಹೊತ್ತು ಪರಮಹಂಸರ ಪೂಜೆಯನ್ನು ದೃಷ್ಟಿಸಿ ನೋಡಿದನು. ಭಾವಾವಿಷ್ಟರಾದ ಪರಮಹಂಸರಿಗೆ ಮಧು ರಾನಾಥನು ಬಂದು ಹತ್ತಿರನಿಂತಿದ್ದು ಗೊತ್ತೇ ಆಗಲಿಲ್ಲ : ಹೀಗೆ ಅನನ್ಯಮನಸ್ಕರಾಗಿ ಮಾಡುತ್ತಿದ್ದ ಪೂಜೆ, ದೇವಿಯಹತ್ತಿರ ಮಗು ವಿನಹಾಗೆ ಹಟಮಾಡುವುದು, ಪೀಡಿಸುವುದು, ಮುಂತಾದ ನೆಲ್ಲ ನೋಡಿ ಮಧುರಾನಾಥನು ಅವೆಲ್ಲವೂ ಐಕಾಂತಿಕ ಪ್ರೇಮಭಕ್ತಿ ಯೆಂದು ತಿಳಿದುಕೊಂಡನು. ಹಾಗೆಯೇ ಸ್ವಲ್ಪ ಹೊತ್ತು ನೋಡು ತಿದ್ದು ಕೊನೆಗೆ ಭಕ್ತಿಯಿಂದ ದೇವಿಗೂ ಪರಮಹಂಸರಿಗೂ ದೀರ್ಘ ದಂಡ ನಮಸ್ಕಾರಮಾಡಿ ಮನೆಗೆ ಹೋಗಿ ಅಲ್ಲಿಂದ ದೇವಸ್ಥಾನದ ಅಧಿಕಾರಿಗಳಿಗೆ “ ಅರ್ಚಕರು ಹೇಗೆ ಬೇಕಾದರೆ ಹಾಗೆ ಪೂಜೆಮಾಡಲಿ: ಅವರಿಗೆ ಅಡಿ ಮಾಡಕೂಡದು, ” ಎಂದು ಕಾಗದಬರೆದನು. ರಾಣಿ ರಾಸಮಣಿಗೂ ಈ ಸಮಾಚಾರಗಳೆಲ್ಲ ತಿಳಿಯಬಂದುವು.

ರಾಣಿಯು ಆಗಾಗ್ಗೆ ದೇವಸ್ಥಾನಕ್ಕೆ ಹೋಗುತ್ತಿದ್ದಳು. ಆಗ

ಪರಮಹಂಸರು ಸುಮಧುರವಾದ ಕಂಠದಿಂದ ಭಕ್ತಿಯುಕ್ತವಾಗಿ ಹಾಡುತ್ತಿದ್ದ ದೇವರ ಕೀರ್ತನೆಗಳನ್ನು ಕೇಳಿ ಬಹಳ ಆನಂದಪಡುತ್ತಿ ದೃಳು, ಒಂದುದಿನ ಹೀಗೆ ದೇವಿಯದರ್ಶನಕ್ಕೆ ಹೋಗಿದ್ದವಳು ಸರಮಹಂಸರನ್ನು ಕರೆದು ಒಂದು ಕೀರ್ತನೆಯನ್ನು ಹಾಡಬೇಕೆಂದು ಕೇಳಿಕೊಂಡಳು. ಅವರು ಹಾಡುತ್ತ ಹಾಡುತ್ತ ಭಾವಾವಿಷ್ಟರಾಗಿ “ ಇಲ್ಲಿಯೂ ಅದೇಯೋಚನೆಯೆ ?” ಎಂದು ಆಕೆಗೆ ಬಲವಾಗಿ ಒಂದು ಪೆಟ್ಟನ್ನು ಕೊಟ್ಟರು, ಅಲ್ಲಿದ್ದವರೆಲ್ಲರೂ ಗಾಬರಿಯಾಗಿ ಕೂಗಾಡಲಾರಂಭಿಸಿದರು. ರಾಣಿಯು ತಾನು ಯಾವುದೋ ಒಂದು ಮೊಖದ್ದಮೆಯ ವಿಚಾರವಾಗಿ ಯೋಚನೆಮಾಡುತ್ತಿದ್ದಳು' ಆದ್ದರಿಂದ ಸಿಟ್ಟಾಗದೆ ತನ್ನನ್ನು ಅರ್ಚಕರು ಶಿಕ್ಷಿಸಿದ್ದು ನ್ಯಾಯ ವಾಗಿದೆಯೆಂದು ಹೇಳಿ ಅವರೆಲ್ಲರನ್ನೂ ಸಮಾಧಾನಮಾಡಿದಳು.