ಪುಟ:ಶ್ರೀರಾಮಕೃಷ್ಣ ಪರಮಹಂಸರ ಚರಿತೆ.djvu/೭೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ



ಚರಿತ್ರೆ

೫೭

ಯಿಂದ ಕೆಲವು ಅಗಳುಗಳನ್ನು ತೆಗೆದುಕೊಂಡು ಅದೂ ದೇವಿಯ ಪ್ರಸಾದವೆಂಬ ಬುದ್ಧಿಯಿಂದ ಸ್ವೀಕರಿಸಿದರು. ಮನಸ್ಸಿನಿಂದ ಅಹಂಕಾರಾಭಿಮಾನಗಳನ್ನು ದೂರಮಾಡುವುದಕ್ಕಾಗಿಯೂ ಮತ್ತು ಹೊಲೆಯ ಮಾದಿಗ ಮುಂತಾದ ಜನಗಳಿಗಿಂತಲೂ ತಾವು ಯಾವ ಅ೦ಶದಲ್ಲಿಯೂ ದೊಡ್ಡವರಲ್ಲವೆಂದು ದೃಢಮಾಡಿಕೊಳ್ಳುವದಕ್ಕಾ ಗಿಯೂ ಹಲಾಲುಕೋರರು ತೊಳೆಯತಕ್ಕೆ ಅಶುಚಿ ಸ್ಥಾನವನ್ನು ಸ್ವಹಸ್ತದಿಂದ ಚೊಕ್ಕಟವಾಡಿದರು. ಶ್ರೀಗಂಧ, ಅಮೇಧ್ಯ ಎರಡು ಪದಾರ್ಥಗಳೂ ಪಂಚಭೂತ ವಿಕಾರಗಳೆಂದು ನಿರ್ಧರಮಾಡಿ ಕೊಂಡು ನಾಲಗೆಯಿಂದ ಅಮೇಧ್ಯವನ್ನು ಮುಟ್ಟಿದರು.' ಇವೇ ಮೊದಲಾದ ನಾವು ಹಿಂದೆ ಎಂದೂ ಕೇಳಿಯೇ ಅರಿಯದ ಅನೇಕ ಸಾಧನೆಗಳನ್ನು ಈ ಕಾಲದಲ್ಲಿ ಮಾಡಿದರು. ದಕ್ಷಿಣೇಶ್ವರಕ್ಕೆ ಬಂದ ಒಬ್ಬ ಸಿದ್ದಪುರುಷನ ಸಹಾಯದಿಂದ ಹಠಯೋಗವನ್ನು ಅಭ್ಯಾಸಮಾಡಿದೂ ಈ ಕಾಲದಲ್ಲಿಯೇ, ಶಿಷ್ಯ ಮಂಡಲಿಯಲ್ಲಿದ್ದ ಕೆಲವರು ಈ ಹಠಯೋಗದಲ್ಲಿ ಉಪದೇಶಮಾಡಿಸಿಕೊಳ್ಳಬೇಕೆಂದು ಪರಮಹಂಸರ ಹತ್ತಿರಕ್ಕೆ ಹೋಗಿದ್ದಾಗ ಅವರಿಗೆ ಹೀಗೆಂದು ಉತ್ತರ ಕೊಡುತ್ತಿದ್ದರು : “ಆ ಸಾಧನಗಳೆಲ್ಲಾ ಈ ಕಾಲಕ್ಕಲ್ಲವೊ ! ಕಲಿ ಗಾಲದಲ್ಲಿ ಜೀವಿಗಳು ಅಲ್ಪಾಯುಗಳು ಮತ್ತು ಅನ್ನ ಗತಪ್ರಾಣರು; ಈಗ ಹಠಯೋಗ ಅಭ್ಯಾಸಮಾಡಿ ದೇಹಗಟ್ಟಿಮಾಡಿಕೊಂಡು, ರಾಜ ಯೋಗ ಅಭ್ಯಾಸಮಾಡಿ ಈಶ್ವರನನ್ನು ಪ್ರಾರ್ಥಿಸುವುದಕ್ಕೆ ಸಮಯ ವೆಲ್ಲಿದೆ ? ಅದೂ ಅಲ್ಲದೆ ಹಠಯೋಗವನ್ನು ಅಭ್ಯಾಸಮಾಡಬೇಕಾ ದರೆ ಅದರಲ್ಲಿ ಸಿದ್ದನಾದ ಗುರುವಿನ ಜೊತೆಯಲ್ಲಿಯೇ ಮೂರು ಹೊತ್ತೂ ಇದುಕೊಂಡು ಊಟ ತಿಂಡಿತೀರ್ಥಗಳಲ್ಲೆಲ್ಲಾ ಅವನು ಹೇಳಿದ ಹಾಗೆ ಕೇಳಿಕೊಂಡು ಬಹುಕಾಲ ಕಠೋರ ನಿಯಮದಿಂದಿರ ಬೇಕು, ನಿಯಮ ಮಾಡುವುದರಲ್ಲಿ ಒಂದಿಷ್ಟು ಹೆಚ್ಚು ಕಮ್ಮಿ ಯಾಯಿತು ಅ೦ದರೆ ಏನಾದರೂ ರೋಗಗಳು ತಲೆಹಾಕಿಕೊಳ್ಳು ವುವು ; ಅನೇಕ ಸಮಯಗಳಲ್ಲಿ ಇಂಥಸಾಧಕರು ಸತ್ತೇಹೋಗುವರು