ಪುಟ:ಶ್ರೀರಾಮಕೃಷ್ಣ ಪರಮಹಂಸರ ಚರಿತೆ.djvu/೮೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ



ಶ್ರೀ ರಾಮಕೃಷ್ಣ ಪರಮಹ೦ಸರ

೬೪

ಅದನ್ನು ಇಲ್ಲಿ ವಿವರಿಸಿಲ್ಲ. ಆದರೆ ತಂತ್ರಶಾಸ್ತ್ರಗಳಲ್ಲಿ ಹೇಳಿರುವ ರೀತಿ ಅನುಷ್ಠಾನಮಾಡುವುದರ ಉದ್ದೇಶವನ್ನು ಮಾತ್ರ ಇಲ್ಲಿ ಸೂಚಿ ಸುತ್ತೇವೆ. ರೂಪರಸಾದಿಗಳು ಜನರ ಮನಸ್ಸನ್ನು ಆಕರ್ಷಣ ಮಾಡಿ ಪುನಃಪುನಃ ಅವರನ್ನು ಜನನಮರಣಗಳಲ್ಲಿ ಸಿಕ್ಕಿಸುತ್ತವೆ. ಮತ್ತು ಜ್ಞಾನಸಂಪಾದನೆ ಮಾಡಗೊಡದೆ ಈಶ್ವರಸಾಕ್ಷಾತ್ಕಾರಕ್ಕೆ ಅಡ್ಡಿಯಾಗಿಬರುತ್ತವೆ; ಅಪೂರ್ವವಾದ ಇಂದ್ರಿಯನಿಗ್ರಹದ ಮೂ ಲಕ ಆ ರೂಪ ರಸಾದಿಗಳನ್ನೂ ಈಶ್ವರಸ್ವರೂಪವೆಂದು ಅಭ್ಯಾಸ ಮಾಡಿಸುವುದೇ ತಾಂತ್ರಿಕ ಕ್ರಿಯೆಗಳ ಸಾಮಾನ್ಯವಾದ ಉದ್ದೇಶ. ಕಠೋರವಾದ ಇಂದ್ರಿಯನಿಗ್ರಹ ಮಾಡಿಕೊಂಡೇ ತಂತ್ರೋಕ್ತ ಸಾಧನ ಗಳನ್ನು ಅನುಷ್ಟಾನಮಾಡಲು ಮೊದಲುಮಾಡಬೇಕು. ಆದ್ದ ರಿಂದ ಸಾಮಾನ್ಯರಿಗೆ ಇದು ಅತ್ಯಂತ ಕಠಿಣ, ತಂತ್ರ ಸಾಧಕನು ಇಂದ್ರಿಯಗಳಿಗೆ ಸ್ವಲ್ಪ ವಶನಾದರೂ ಅವನಿಗೆ ಭಯಂಕರವಾದ ಅಧಃಪತನವಾಗುವುದು. ಬಹುಶಃ ಈ ಕಾರಣದಿಂದಲೇ, ಪರನ ಹಂಸರು ಅವುಗಳನ್ನು ತಮ್ಮ ಶಿಷ್ಯರೆದುರಿಗೆ ವಿಸ್ತಾರವಾಗಿ ಹೇಳಿರ ಲಾರರು.

ಈ ಸಾಧನೆಗಳು ಮುಗಿದಮೇಲೆ ಪರಮಹಂಸರಿಗೆ ಅಣಿ

ಮಾದ್ಯಷ್ಟ ಸಿದ್ದಿಗಳೂ ಸ್ವಾಧೀನವಾದುವು. ಆದರೆ ಅವರು ಅವು ಗಳನ್ನು ಅಮೇಧದಂತೆ ಹೇಯವೆಂದು ತಿಳಿದು ಅವುಗಳ ಕಡೆಗೆ ಸ್ವಲ್ಪವೂ ಲಕ್ಷ್ಯಕೊಡುತ್ತಿರಲಿಲ್ಲ. ಮುಂದೆ ಇವೆಲ್ಲ ನಡೆದ ಅನೇಕ ದಿನಗಳ ಮೇಲೆ ಒಂದುದಿವಸ ಅವರು ಪಂಚವಟಿಯಲ್ಲಿ ತಮ್ಮ ಪ್ರಿಯ ಶಿಷ್ಯರಾದ ವಿವೇಕಾನಂದರನ್ನು ಕರೆದು “ ನೋಡೊ! ನನ್ನಲ್ಲಿ ಪ್ರಸಿದ್ದವಾದ ಅಣಿಮಾದಷ್ಟಸಿದ್ಧಿಗಳು ಇವೆ. ಆದರೆ ಅವುಗಳನ್ನು ನಾನು ಯಾವಾಗಲೂ ಪ್ರಯೋಗಮಾಡುವುದಿಲ್ಲ ಎಂದು ಮೊದಲಿ ನಿಂದಲೂ ಸಂಕಲ್ಪ ಮಾಡಿದ್ದೆ, ಅವುಗಳನ್ನು ಉಪಯೋಗಿಸಬೇಕಾದ ಅಗತ್ಯವೂ ಬರಲಿಲ್ಲ. ನೀನು ಧರ್ಮ ಪ್ರಚಾರ ಮೊದಲಾದ ಅನೇಕ ಕಾರ್ಯಗಳನ್ನು ಮಾಡಬೇಕಾಗುತ್ತೆ, ಆದ್ದರಿಂದ ನಿನಗೇ ಇವ