ಪುಟ:ಶ್ರೀರಾಮಕೃಷ್ಣ ಪರಮಹಂಸರ ಚರಿತ್ರೆ.djvu/೬೬

ವಿಕಿಸೋರ್ಸ್ದಿಂದ
ನ್ಯಾವಿಗೇಷನ್‌ಗೆ ಹೋಗು ಹುಡುಕಲು ಹೋಗು
ಈ ಪುಟವನ್ನು ಪರಿಶೀಲಿಸಲಾಗಿದೆ

ಆರನೆಯ ಅಧ್ಯಾಯ

ಸಾಧನಗಳು ; ಮೊದಲನೆಯಭಾಗ : 1855-1858.

ಪರಮಹಂಸರು ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡ ರಾಗಿ ಬಹುಮಟ್ಟಿಗೆ ರಾಮಕುಮಾರನ ಲಾಲನೆಪಾಲನೆಗಳಲ್ಲಿಯೇ ಬೆಳೆದಿದ್ದರು. ಆದ್ದರಿಂದ ಪಿತೃಸಮಾನವಾದ ಅಣ್ಣನು ದೇಹಬಿಟ್ಟ ಸುದ್ದಿಯನ್ನು ಕೇಳಿ ಅವರಿಗೆ ಹಿಡಿಯಲಾರದಷ್ಟು ದುಃಖವಾಯಿತು. ಈ ಜಗತ್ತಿನಲ್ಲಿ ಸಮಸ್ತವೂ ಅಸತ್ಯವೆಂಬುದು ಮನಸ್ಸಿಗೆ ಮತ್ತಷ್ಟು ನಾಟಿತು. ಜಗದಂಬೆಯಲ್ಲಿ ಭಕ್ತಿಯ ಪೂಜೆಯಲ್ಲಿ ಆಸಕ್ತಿಯ ಹೆಚ್ಚಾದುವು. ಇಲ್ಲಿಂದ ಮುಂದಕ್ಕೆ ಶಾಸ್ತ್ರೀಯವಾಗಿ ದೇವೀಪೂಜೆ ಮಾಡಿದಮೇಲೆ ದೇವಿಯ ಎದುರಿಗೆ ತನ್ಮಯರಾಗಿ ಕುಳಿತು ಹೊತ್ತು ಕಳೆಯುತ್ತಿದ್ದರು. ಆಗಾಗ ರಾಮಪ್ರಸಾದ ಮುಂತಾದ ದಾಸರ ಕೀರ್ತನೆಗಳನ್ನು ಹಾಡುತ್ತೆ ಹಾಡುತ್ತ ಕೇವಲ ವ್ಯಾಕುಲ ಹೃದಯ ರಾಗಿ `ತಾಯಾ, ನೀನು ರಾಮಪ್ರಸಾದರಿಗೆ ದರ್ಶನಕೊಟ್ಟೆ ; ನನಗೆ ಯಾಕೆ ದರ್ಶನಕೊಡುವುದಿಲ್ಲ? ನಾನು ಧನ, ಜನ, ಭೋಗ, ಸುಖ ಇವುಗಳಾವುದನ್ನೂ ಅಪೇಕ್ಷಿಸುವುದಿಲ್ಲ. ನನಗೆ ದರ್ಶನ ವನ್ನು ಕೊಡು' ಎಂದು ಪ್ರಾರ್ಥಿಸುವರು. ಆಗ ಅವರ ಕಣ್ಣೀರಿಂದ ಎದೆಯು ತೊಟ್ಟು ಹೋಗುತ್ತಿತ್ತು. ಹೀಗೆ ಕಾತರರಾಗಿ ಅತ್ತ ಮೇಲೆ ಹೃದಯದ ಭಾರವು ಕಡಿಮೆಯಾಗಿ ಪುನಃ ಕೀರ್ತನೆ ಹೇಳು ವುದಕ್ಕೆ ಮೊದಲು ಮಾಡುತ್ತಿದ್ದರು.

ಮಧ್ಯಾಹ್ನದಲ್ಲಿಯೂ ಸಾಯಂಕಾಲದಲ್ಲಿಯೂ ದೇವಸ್ಥಾನದ ಬಾಗಿಲುಹಾಕಿದಮೇಲೆ ಹತ್ತಿರದಲ್ಲಿದ್ದ ಒಂದು ನಿರ್ಜನವಾದಕಾಡಿಗೆ ಹೋಗಿ ದೇವಿಯ ಧ್ಯಾನದಲ್ಲಿ ಮಗ್ನರಾಗಿರುತ್ತಿದ್ದರು. ಹೃದಯನು ಅವರ ಜೊತೆಯಲ್ಲಿಯೇ ಯಾವಾಗಲೂ ಇರುತ್ತಿದ್ದನೆಂದು ಹಿಂದೆ