ಯಿಂದ ಕೆಲವು ಅಗಳುಗಳನ್ನು ತೆಗೆದುಕೊಂಡು ಅದೂ ದೇವಿಯ ಪ್ರಸಾದವೆಂಬ ಬುದ್ಧಿಯಿಂದ ಸ್ವೀಕರಿಸಿದರು. ಮನಸ್ಸಿನಿಂದ ಅಹಂಕಾರಾಭಿಮಾನಗಳನ್ನು ದೂರಮಾಡುವುದಕ್ಕಾಗಿಯೂ ಮತ್ತು ಹೊಲೆಯ ಮಾದಿಗ ಮುಂತಾದ ಜನಗಳಿಗಿಂತಲೂ ತಾವು ಯಾವ ಅ೦ಶದಲ್ಲಿಯೂ ದೊಡ್ಡವರಲ್ಲವೆಂದು ದೃಢಮಾಡಿಕೊಳ್ಳುವದಕ್ಕಾಗಿಯೂ ಹಲಾಲುಕೋರರು ತೊಳೆಯತಕ್ಕ ಅಶುಚಿಸ್ಥಾನವನ್ನು ಸ್ವಹಸ್ತದಿಂದ ಚೊಕ್ಕಟಮಾಡಿದರು. ಶ್ರೀಗಂಧ, ಅಮೇಧ್ಯ ಎರಡು ಪದಾರ್ಥಗಳೂ ಪಂಚಭೂತ ವಿಕಾರಗಳೆಂದು ನಿರ್ಧರಮಾಡಿ ಕೊಂಡು ನಾಲಗೆಯಿಂದ ಅಮೇಧ್ಯವನ್ನು ಮುಟ್ಟಿದರು. ಇದೇ ಮೊದಲಾದ ನಾವು ಹಿಂದೆ ಎಂದೂ ಕೇಳಿಯೇ ಅರಿಯದ ಅನೇಕ ಸಾಧನೆಗಳನ್ನು ಈ ಕಾಲದಲ್ಲಿ ಮಾಡಿದರು. ದಕ್ಷಿಣೇಶ್ವರಕ್ಕೆ ಬಂದ ಒಬ್ಬ ಸಿದ್ಧ ಪುರುಷನ ಸಹಾಯದಿಂದ ಹಠಯೋಗವನ್ನು ಅಭ್ಯಾಸಮಾಡಿದ್ರೂ ಈ ಕಾಲದಲ್ಲಿಯೇ ಶಿಷ್ಯ ಮಂಡಲಿಯಲ್ಲಿದ್ದ ಕೆಲವರು ಈ ಹಠಯೋಗದಲ್ಲಿ ಉಪದೇಶಮಾಡಿಸಿಕೊಳ್ಳಬೇಕೆಂದು ಪರಮಹಂಸರ ಹತ್ತಿರಕ್ಕೆ ಹೋಗಿದ್ದಾಗ ಅವರಿಗೆ ಹೀಗೆಂದು ಉತ್ತರ ಕೊಡುತ್ತಿದ್ದರು :-(ಆ ಸಾಧನಗಳೆಲ್ಲಾ ಈ ಕಾಲಕ್ಕಲ್ಲವೋ ! ಕಲಿಗಾಲದಲ್ಲಿ ಜೀವಿಗಳು ಅಲ್ಪಾಯುಗಳು ಮತ್ತು ಅನಗತಪ್ರಾಣರು; ಈಗ ಹಠಯೋಗ ಅಭ್ಯಾಸಮಾಡಿ ದೇಹಗಟ್ಟಿ ಮಾಡಿಕೊಂಡು, ರಾಜ ಯೋಗ ಅಭ್ಯಾಸಮಾಡಿ ಈಶ್ವರನನ್ನು ಪ್ರಾರ್ಥಿಸುವುದಕ್ಕೆ ಸಮಯ ಎಲ್ಲಿದೆ ? ಅದೂ ಅಲ್ಲದೆ ಹಠಯೋಗವನ್ನು ಅಭ್ಯಾಸಮಾಡಬೇಕಾದರೆ ಅದರಲ್ಲಿ ಸಿದ್ದನಾದ ಗುರುವಿನ ಜೊತೆಯಲ್ಲಿಯೇ ಮೂರು ಹೊತ್ತೂ ಇದ್ದುಕೊಂಡು ಊಟ ತಿಂಡಿತೀರ್ಥಗಳಲ್ಲೆಲ್ಲಾ ಅವನು ಹೇಳಿದ ಹಾಗೆ ಕೇಳಿಕೊಂಡು ಬಹುಕಾಲ ಕಠೋರ ನಿಯಮದಿಂದಿರಬೇಕು. ನಿಯಮ ಮಾಡುವುದರಲ್ಲಿ ಒಂದಿಷ್ಟು ಹೆಚ್ಚು ಕಮ್ಮಿಯಾಯಿತು ಅಂದರೆ ಏನಾದರೂ ರೋಗಗಳು ತಲೆಹಾಕಿಕೊಳ್ಳುವುವು ; ಅನೇಕ ಸಮಯಗಳಲ್ಲಿ ಇಂಥಸಾಧಕರು ಸತ್ತೇಹೋಗುವರು