ಪುಟ:Kedage.pdf/೧೧

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಕನ್ನಡದ ಒಂದು ಭಾಗದಲ್ಲಿ ಇದ್ದ ಪ್ರಾಚೀನ ಯಕ್ಷಗಾನದ ವೇಷಚಿತ್ರ ಆ ಗೊಂಬೆಗಳಲ್ಲಿ ಇದೆ ಎಂದರ್ಥ. ಕುಂಬಳೆ ಸೀಮೆಗೆ ಕನ್ನಡಿಗರ ದಂಡು ಯಕ್ಷಗಾನ ವನ್ನು ಒಯ್ದುದು ನಿಜವಾದರೆ ಅದು ಕಾರ್ಕಳವನ್ನು ಹಾದೇ ಹೋಗಿರಬೇಕು. ಕರಾವಳಿಗೂ ಘಟ್ಟದ ಮೇಲುಭಾಗಕ್ಕೂ ಇದ್ದ ಒಂದು ಪ್ರಾಚೀನ ಸಂಪರ್ಕ ದಾರಿ ಆಗುಂಬೆ—ಕಾರ್ಕಳ.

'ಕಲೆ ಮತ್ತು ವ್ಯವಸಾಯ' ಪ್ರಬಂಧದಲ್ಲಿ ಜೋಶಿ ಅವರು ರಂಗಭೂಮಿಯ ಹಾಗೂ ಗೊಂಬೆಯಾಟದ ಉಳಿವಿಗೆ ಉಪಯುಕ್ತ ಸಲಹೆಗಳನ್ನಿಟ್ಟಿದ್ದಾರೆ. ಜೋಶಿ ಅವರು ಅಂದಂತೆ ವಾಣಿಜ್ಯಕರಣದಿಂದ ತೆಂಕುತಿಟ್ಟು ಪರಿವರ್ತನೆಗೆ ಒಳಪಟ್ಟುದು ನಿಜ. ಆದರೆ ಬಡಗು ಕೂಡ ಅದೇ ರೀತಿಯ ಇನ್ನೊಂದು ವ್ಯಾಪಾರೀ ಪಿಡುಗಿಗೆ ಒಳಗಾಗಿದೆ. ಇಲ್ಲಿ ಕಾಲ್ಪನಿಕ ಸತ್ತ್ವಹೀನ ಕಥಾನಕಗಳನ್ನು ಪ್ರಸಂಗವಾಗಿಸಿ ಬಯಲಾಟದ ರೂಪವಿಶೇಷವನ್ನು ಅಪಮೌಲ್ಯಗೊಳಿಸಿರುವುದು ಅಷ್ಟೇ ಸತ್ಯ. ಬಡಗಿನ ಹಳೆಯ ಭಾಗವತರು, ಮದ್ದಳೆಗಾರರು ಇಂದು ನೇರ ರಂಗಸ್ಥಳಕ್ಕೆ ಹೋಗಿ 'ಕಸುಬು' ಮಾಡಲಾರದ ಸ್ಥಿತಿಯನ್ನು ತಮ್ಮ ಕಣ್ಣೆದುರೇ ಕಂಡು ಅಸಹಾಯಕ ರಾಗಿದ್ದಾರೆ. ಒಂದು ರಂಗಭೂಮಿಯಿಂದ ಇನ್ನೊಂದು ಕವಲು ಹೇಗೆ ಹುಟ್ಟಿ ಕೊಳ್ಳುತ್ತದೆ ಎಂಬುದಕ್ಕೆ ನಮ್ಮ ಕಣ್ಣೆದುರೇ ಎದ್ದು ಬಂದ ತುಳು ಯಕ್ಷಗಾನವೇ ನಿದರ್ಶನವಾಗುತ್ತದೆ.

'ಪ್ರಸಂಗರಚನೆ: ರಂಗದೃಷ್ಟಿ' ಜೋಶಿ ಅವರ ವಿವರವಾದ ಪೃಥಕ್ಕರಣ, ಸೂಕ್ಷ್ಮ ವಿವೇಚನೆಗೆ ಕನ್ನಡಿಯಾಗಿದೆ. ಈ ಪ್ರಬಂಧದಲ್ಲಿ ಅಂತೆಯೇ 'ತಾಳಮದ್ದಳೆಯ ಮಾತುಗಾರಿಕೆ' ಹಾಗೂ 'ಅರ್ಥಗಾರಿಕೆ: ಸೃಜನಶೀಲದೃಷ್ಟಿ' ಇವುಗಳಲ್ಲಿ ಪ್ರಸಂಗ ಕೃತಿ ಹಾಗೂ ಅರ್ಥಧಾರಿಯ ಸಂಬಂಧಗಳನ್ನು ಸೂಕ್ಷ್ಮವಾಗಿ ಸೀಳಿನೋಡ ಲಾಗಿದೆ. ಇವುಗಳನ್ನೆಲ್ಲ ಹಾಮಹೋಗುವಾಗ ಸಹಮತದ ನಡುವೆ ಪ್ರಶ್ನೆ ಲೊಂದು ಎದ್ದು ನಿಲ್ಲುತ್ತದೆ. ಅದು ಪ್ರಸಂಗದ ಆಶಯವನ್ನು ತಿದ್ದಲು ಅರ್ಥಧಾರಿಗೆ ಎಷ್ಟರ ಮಟ್ಟಿನ ಸ್ವಾತಂತ್ರ 6 ಇದೆ ಎಂಬುದು "...ಸೃಜನಶೀಲ ಅರ್ಥಧಾರಿ ಪ್ರಸಂಗದ ಆಶಯವನ್ನು, ಹಂದರವನ್ನು ಮೀರಿ ನಡೆಯುತ್ತಾನೆ." (ಪು. 64) ಇಲ್ಲಿ ಮೂರುವುದರ ಅಗತ್ಯದ ಜೊತೆಗೆ ಮೀರುವಿಕೆಯ ಮಿತಿ ಗಳನ್ನೂ ಸ್ಪಷ್ಟಪಡಿಸಿದ್ದರೆ ಒಳ್ಳೆಯದಿತ್ತು. ಇಲ್ಲವಾದರೆ ಪ್ರಸಂಗವೆಂಬುದು ಅರ್ಥಧಾರಿಗಳು ತಮಗೆ ಬೇಕಾದಂತೆ ಎತ್ತಬಹುದಾದ ಕೈಗೂಸಾಗುವ ಭಯವಿದೆ. ಪ್ರಸಂಗದ ಆಶಯವನ್ನು ಹೆಚ್ಚು ವ್ಯಾಪಕತೆಗೆ ವಿಕಾಸಗೊಳಿಸುವುದಾದರೆ, ಅಥವಾ ಆಧುನಿಕ ಪರಿಭಾಷೆಯಲ್ಲಿ ಹೆಚ್ಚು ಪ್ರಗತಿಪರವಾಗಿ ಮೆರೆಯಿಸುವುದಾದರೆ ಜೋಶಿ ಅವರ ಅಭಿಪ್ರಾಯ ಸ್ವೀಕಾರಾರ್ಹ. ಪ್ರಸಂಗದ ಆಶಯದಿಂದ ಪ್ರತ್ಯೇಕವಾದ

X