ಪುಟ:Kedage.pdf/೬೦

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

48 / ಕೇದಗೆ

ಮನೋಧರ್ಮ ಇವು ಹದವಾಗಿ ಬೆರೆತಿರಬೇಕು. ಅರ್ಥಗಾರನಿಗೆ ಪುರಾಣಸಾಹಿತ್ಯ, ದರ್ಶನ ಮುಂತಾದುವುಗಳ ಪಾಂಡಿತ್ಯ ಅವಶ್ಯವೇ. ಆದರೆ ಅದು ಕಲೆಗೆ ಅಡಿಯಾಳಾಗಿ ದುಡಿಯಬೇಕು. ಇಲ್ಲವಾದರೆ ಪಾಂಡಿತ್ಯದ ವಶಕ್ಕೆ ಸಿಕ್ಕಿದ ಅರ್ಥಗಾರಿಕೆ ಪ್ರವಚನವೋ, ಶುಷ್ಕ ವ್ಯಾಖ್ಯಾನವೋ ಆಗುತ್ತದೆ. ತರ್ಕಪಾಂಡಿತ್ಯ ನಾಟಕೀಯತೆಗಳ ಹದವಾದ ವಿವೇಕಪೂರ್ಣವಾದ ಪಾಕ ಅದರಲ್ಲಿರಬೇಕು, ಆಗಲೇ ಅದರ ಮಾತು ಸೃಷ್ಟಿಕಾರ್ಯವಾಗುತ್ತದೆ.

ಪ್ರತಿಭೆಯಲ್ಲಿ ಎರಡು ಬಗೆಗಳೆಂದು ಗುರುತಿಸುವುದುಂಟು. ವ್ಯಾಖ್ಯಾಪ್ರತಿಭೆ, ಸೃಷ್ಟ್ಯಾತ್ಮಕಪ್ರತಿಭೆ ಎಂದು. (Critical talent and Creative talent) ಒಳ್ಳೆಯ ವ್ಯಾಖ್ಯಾನ - ವಿಮರ್ಶನಪ್ರತಿಭೆಯು ಸ್ವಯಂ ಸೃಷ್ಟಿಶೀಲವೂ ಆಗಿರುತ್ತದೆ ಎಂಬುದು ನಿಜವಾದರೂ ಆ ಬಗೆಯ ಎರಡು ಮಾರ್ಗಗಳ ತತ್ವಕ್ಕೆ ಅದೇನೂ ಬಾಧಕವಲ್ಲ, ಇರಲಿ. ಅರ್ಥಗಾರಿಕೆ ಈ ಎರಡು ಪ್ರತಿಭೆಗಳನ್ನು ಬಿಂಬಿಸುತ್ತದೆ. ಪ್ರಸಂಗದ ಪದ್ಯಗಳನ್ನು ಆಧರಿಸಿ ಬೆಳೆಯುವ ತಾಳಮದ್ದಲೆಯ ಮಾತುಗಾರಿಕೆಯೂ ಆ ಪದ್ಯದ, ಅದರಲ್ಲಿರುವ ಪದಗಳ ವ್ಯಾಖ್ಯಾನವಾಗುವುದೂ ಸ್ವಾಭಾವಿಕ. ಆದರೆ ಸೃಜನಶೀಲವಾದ ನೋಟವಿಲ್ಲದಿದ್ದರೆ ಒಂದೋ ಬರಿಯ ಅನುವಾದವಾಗುತ್ತದೆ, ಇಲ್ಲವೇ ವ್ಯಾಖ್ಯಾನ ಮಾತ್ರವಾಗುತ್ತದೆ. ಇವೆರಡನ್ನೂ ಒಳಗೊಂಡು. ಆದರೆ ಅವೆರಡನ್ನೂ ಮೀರಬಲ್ಲದ್ದೇ ಒಳ್ಳೆಯ ಅರ್ಥಗಾರಿಕೆಯಾಗುತ್ತದೆ. ತೀರ ಸಾಮಾನ್ಯವೆಂದು ತೋರುವ ಯಕ್ಷಗಾನ ಪ್ರಸಂಗಗಳ ಪದ್ಯಗಳಿಗೆ ನಮ್ಮ ಪ್ರತಿಭಾವಂತ ಅರ್ಥಧಾರಿ ತುಂಬ ಕಾವ್ಯದ ಅಂತರಂಗ ತರುವ ಅರ್ಥಮಂತಿಕೆ ಸೃಷ್ಟಿಸುವ ನಾಟಕೀಯ ಸಂಭಾಷಣೆ ಆಶ್ಚರ್ಯಕರವಾದದ್ದು. ಅರ್ಥಗಾರನ ವ್ಯತ್ಪತ್ತಿ, ಅಧ್ಯಯನ, ಜೀವನಪರಿಶೀಲಗಳ ಹರಹು ಪದ್ಯಗಳ ಸೀಮೆಗಿಳಿದು ಹೊಸರೂಪ ತಾಳಿ ಹೊರಬರುವ ಪ್ರಕ್ರಿಯೆ ವಿಸ್ಕೃತ ಅಭ್ಯಾಸಕ್ಕೆ ಒಳ್ಳೆಯ ವಸ್ತು.

ತಾಳಮದ್ದಲೆಯ ನಾಟಕವನ್ನು ಹಲವು ಅರ್ಥಗಾರರು ಸೇರಿ ರೂಪಿಸುತ್ತಾರೆ. ಅವರಲ್ಲಿ ಪ್ರತಿಭೆಯ ವ್ಯತ್ಯಾಸವಿರುತ್ತದೆ, ದೃಷ್ಟಿಕೋನದ ಭಿನ್ನತೆ ಪಾತ್ರಗಳ, ಸನ್ನಿವೇಶಗಳ ಬಗೆಗೆ ಭಿನ್ನ ಭಿನ್ನ ಅಭಿಪ್ರಾಯಗಳಿರುತ್ತದೆ. ಅವರೆಲ್ಲ ಒಟ್ಟು ಸೇರಿ ಪ್ರಸಂಗವು ನೀಡುವ ಸ್ಕೂಲವಾದ ಒಂದು ಆವರಣದ ಒಳಗೆ ಕೆಲಸ ಮಾಡುತ್ತಾರೆ. ಹೀಗಾಗಿ ಪಾತ್ರಚಿತ್ರಣದ ಬಗೆಗೆ ಸಂಪಾದದ ಬಗೆಗೆ ತೀರ ಪೂರ್ವಗೃಹೀತವಾದ ಸಿದ್ಧ ಕಲ್ಪನೆಗಳುಳ್ಳವನಿಗೆ ತೊಡಕಾಗಬಹುದು. ಪ್ರದರ್ಶನವೂ ಕಲಾಪೂರ್ಣವಾಗದಿರಬಹುದು. ಒಬ್ಬನು ಮಾಡುವ ಪಾತ್ರಚಿತ್ರಣ ಆಡುವ ಮಾತು, ರಚಿಸುವ ಸಂಭಾಷಣೆ ಇನ್ನೊಬ್ಬನ ಮಾತುಗಳನ್ನು ಹೊಂದಿಕೊಂಡಿರುತ್ತದೆ. ಕೆಲವು ಸಲ ಈ ಅವಲಂಬನ ಎಷ್ಟು ಇರುತ್ತದೆ ಎಂದರೆ