ಪುಟ:Kedage.pdf/೬೯

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಅರ್ಥಗಾರಿಕೆ : ಸೃಜನಶೀಲದೃಷ್ಟಿ /57

ಮೂಲಗಳಾದ ಭಾಗವತ, ದೇವೀಭಾಗವತಗಳ ಹರಡೂ ಇಲ್ಲ. ವ್ಯಾಸಭಾರತ, ವಾಲ್ಮೀಕಿರಾಮಾಯಣಗಳ ಜೀವನದರ್ಶನವಂತೂ ಇಲ್ಲವೇ ಇಲ್ಲ. ಆ ಉದ್ದೇಶವೂ ಪ್ರಸಂಗಕರ್ತರಿಗಿಲ್ಲ. ಇರಬೇಕಾಗಿಯೂ ಇಲ್ಲ. ಪ್ರಸಂಗದ ನಡೆ, ರಚನಾವಿನ್ಯಾಸ ಮತ್ತು ನಾಟಕೀಯ ಔಚಿತ್ಯಕ್ಕೆ ಬಾಧಕವಾಗದ ಹಾಗೆ ಸಾಗಬೇಕಾದ ಅರ್ಥಗಾರಿಕೆಗೆ ಈ ಅಂಶ ಒಂದು ಮಿತಿಯನ್ನು ಸೇರುತ್ತದೆ.

ಈ ಎಲ್ಲ ಮಿತಿಗಳ ಮಧ್ಯೆ ಅರ್ಥಧಾರಿ ತನ್ನ ಸೃಷ್ಟಿಶೀಲ ಅಭಿವ್ಯಕ್ತಿಯನ್ನು ತೊಡಗಿಸಬೇಕು. ಸಾಕಷ್ಟು ಪ್ರಯೋಗಗೊಂಡು ಒಂದು ಬಗೆಯಲ್ಲಿ ಸವೆದು ಹೋದ ಭಾಷಾಪ್ರಯೋಗ ಕ್ರಮವೊಂದು ಯಕ್ಷಗಾನಕ್ಕೆ ಇದೆ. ಹಾಗೆಂದು ಅರ್ಥಧಾರಿ ಅದನ್ನು ಪೂರ್ತಿಯಾಗಿ ಬಿಡುವ ಹಾಗಿಲ್ಲ. ಅರ್ಥಗಾರಿಕೆಯ ಆವರಣ ನಿರ್ಮಾಣ, ರಂಗಕ್ರಿಯೆಯ ನಡೆಗೆ ಆ ಪದ್ದತಿಯೂ ಒಂದು ಪ್ರಧಾನ ವಾಹಕ. ಹಾಗಾಗಿ ಸಿದ್ಧಸ್ವರೂಪದ ಭಾಷೆಯ ತೀರ ಸ್ವಾತಂತ್ರ ವಹಿಸದೆ, ಅದಕ್ಕೆ ಹೊಸತನವನ್ನು ಅಭಿವ್ಯಕ್ತಿಸುವ ಜೀವಂತಿಕೆಯನ್ನು ಅರ್ಥಧಾರಿ ತುಂಬಿಸಬೇಕು. ಸೃಜನಶೀಲನಾದ ಕಲಾವಿದ ಎದುರಿಸಬೇಕಾದ ಸೂಕ್ಷ್ಮವಾದ ಒಂದು ಸಮಸ್ಯೆ ಇದು.

ಹಿರಿಯ ಅರ್ಥಧಾರಿಗಳು, ಕೆಲವು ಪಾತ್ರಗಳ ವಿವಿಧ ವಿನ್ಯಾಸಗಳನ್ನು ಚಿತ್ರಿಸಿ “ಹೊಸರಾಗಿ ಹೇಳಲು ಉಳಿದಿಲ್ಲ” ಎಂದು ಕಾಣುವಷ್ಟಕ್ಕೆ ಬೆಳೆಸಿ ಬಿಟ್ಟಿದ್ದಾರೆ. ಈ ಸವಾಲುಗಳೂ ಸೃಜನಶೀಲತೆಗಿವೆ. ಈ ಮಧ್ಯೆ ಭಾಷೆ, ಭಾವ, ಚಿತ್ರಣ, ವಾದ - ಈ ನಾಲ್ಕರಲ್ಲೂ ನಾವೀನ್ಯವನ್ನು ತರುವ ಇಕ್ಕಟ್ಟಿನ, ಆದರೂ ರೋಚಕವಾದ ಕಾರ ಇದೆ. ಇಂತವ ಕೆಲಸವನ್ನು ಯಶಸ್ವಿಯಾಗಿ ಕೈಗೆತ್ತಿಕೊಂಡ ದೃಷ್ಟಾಂತಗಳೂ ಇವೆ.

ಪಾತ್ರವೊಂದು ಪ್ರವೇಶಿಸಿ ಆರಂಭದಲ್ಲಿ ಹೇಳುವ ಪೀಠಿಕೆ ಅಥವಾ ಪ್ರವೇಶ ಇದು ಪಾತ್ರದ ಪರಿಚಯಕ್ಕೆ, ಅದು ಆ ಸಂದರ್ಭದಲ್ಲಿ ವಹಿಸಿದ ನಿಲುದಮೆಗೆ ಯೋಚನಾಕ್ರಮಕ್ಕೆ ಕನ್ನಡಿ.ಸಂಪ್ರದಾಯದಂತೆ ಪೀಠಿಕೆಯಲ್ಲಿ ಪೂರ್ವಕತೆಯನ್ನು ಹೇಳುವುದು ಪದ್ಧತಿ. ರಾಮನಾದರೆ, ಆ ಪ್ರಸಂಗದ ಕತೆಯ ವರೆಗಿನ ರಾಮಾಯಣ. ಕೃಷ್ಣನಾದರೆ ಅವತಾರಕಾರ ಮುಂತಾಗಿ, ಆದರೆ ಪಾತ್ರದ ಪೀಠಿಕೆಯನ್ನು ಪಾತ್ರದ ಮನೋರಂಗಕ್ಕೆ ಅಭಿವ್ಯಕ್ತಿಯಾಗಿ ಬಳಸುವ ಕ್ರಮದ ಆವಶ್ಯಕತೆಯನ್ನು ಕಂಡ ಕಲಾವಿದರು ಪೀಠಿಕೆಯಲ್ಲಿ ನಾವೀನ್ಯವನ್ನು ತರಲಾರಂಭಿಸಿದರು. ಅಧ್ಯಯನದ ಹಿನ್ನೆಲೆಯುಳ್ಳ ಅರ್ಥಧಾರಿಗಳು ಅದರಲ್ಲಿ ಬರುವ ವಿಷಯಗಳ ವಿಶ್ಲೇಷಣೆಗಳ ಸಾಧ್ಯತೆಗಳನ್ನು ಎಸ್ತರಿಸಿದರು.

ಆದರೆ ಬರಬರುತ್ತ ಈ ಪೀಠಿಕೆ ಒಂದು ಅತಿಗೆ ಹೋಯಿತು. ತೀರ ದೀರ್ಘವಾದ ಪೀಠಿಕೆ, ಸಮಗ್ರ ಪ್ರಸಂಗದ ಸ್ವಾರಸ್ಯವನ್ನು ಪೀಠಿಕೆಯಲ್ಲಿ