ಪುಟ:Kedage.pdf/೭೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

ಅರ್ಥಗಾರಿಕೆ : ಸೃಜನಶೀಲದೃಷ್ಟಿ /61

ಪ್ರಾಶಸ್ತ್ರ ಬಂದುದರಿಂದ, ನಮ್ಮ ದಾರ್ಶನಿಕದೃಷ್ಟಿಯಲ್ಲಿ ಬಂದ ಏಕಮುಖಿ ವಿಚಾರಕ್ರಮವನ್ನು ಬದಿಗೊತ್ತಿ ಯೋಚಿಸುವ ಸ್ಫೂರ್ತಿಯನ್ನು ವರ್ಶನಗಳ ಅಭ್ಯಾಸ ನಮಗೆ ನೀಡಬೇಕು.

ಕಾಳಿದಾಸನ ನಾಜೂಕಿನ ಪ್ರಪಂಚ, ಭಾಸನ ಸೃಷ್ಟಿಲೋಕ, ಶೂದ್ರಕನ ವಾಸ್ತವದೃಷ್ಟಿ, ಸುಭಾಷಿತಗಳ ಅನುಭವಭಂಡಾರ ಇವು ಅರ್ಥಧಾರಿಯ ಅಭಿವ್ಯಕ್ತಿಗೆ ಮೊನಚನ್ನು ಅಲಗನ್ನು ನೀಡುತ್ತವೆ. ಆದರೆ ವಿಷಯಕ್ಕಾಗಿ ವಿಷಯವನ್ನು ಹೇಳುವ ಉಪದೇಶಕನಾಗಿ ಅರ್ಥಧಾರಿ ಕೆಲಸ ಮಾಡಿದರೆ ಅದು ಸಿದ್ಧಿಸ ಲಾರದು.

ರಾಮಾಯಣದ ಅಯೋಧ್ಯಾಕಾಂಡದ ಕೌಟುಂಬಿಕಚಿತ್ರವನ್ನು ತೆಗೆದುಕೊಂಡರೆ ವಾಲ್ಮೀಕಿಯ ಸಾರ್ವಕಾಲಿಕಸ್ಪಂದಿಯಾದ ಸೃಷ್ಟಿ ಕಾಣಿಸುತ್ತದೆ. ಇತ್ತ ಕೈಕೇಯಿಯನ್ನು, ಅತ್ತ ರಾಮನನ್ನು ಬಿಡಲಾರದ ದಶರಥನ ಕಷ್ಟ, ರಾಮನ ಮೌಲ್ಯ ದೃಷ್ಟಿಯ ಔನ್ನತ್ಯ, ತನಗಾಗಿಯೇ ನಡೆದ ಸಂಚಿನ ಪರಿಣಾಮವನ್ನು ತೀವ್ರವಾಗಿ ತಿರಸ್ಕರಿಸಿ ಪರಿಸ್ಥಿತಿಯನ್ನು ಮರಳಿ ಪೂರ್ವಸ್ಥಿತಿಗೆ ತರಲು ಯತ್ನಿಸುವ ಭರತ, ಪ್ರತಿಭಟನೆಯಿಂದ ಉರಿಯುವ ಲಕ್ಷ್ಮಣ, ಒಡತಿಗಾಗಿ ಚಿಂತಿಸಿ ಇಡಿಯ ಪ್ರಕರಣದ ಸೃಷ್ಟಿಗೆ ಕಾರಣಳಾಗುವ ಮಂಥರೆಯ ಲೌಕಿಕ. ಪರಿಣಾಮದ ನೋಟವಿಲ್ಲದೆ ಮಹತ್ವಾಕಾಂಕ್ಷೆಗೆ ಮನವೀಯುವ ಕೈಕೆಯಿ - ಇವೆಲ್ಲ ಶುದ್ಧ ಮಾನುಷಪ್ರಪಂಚದ ಚಿತ್ರಗಳು, ಶೂರ್ಪನಖಾಪ್ರಕರಣ, ವಾಲಿವಧೆ, ಹೀಗೆ ರಾಮಾಯಣದ ಉದ್ದಕ್ಕೂ ಆಳಕ್ಕೆ ಅಗೆದಷ್ಟು ಸಿಗುವ ಮಣ್ಣಿನ ಬದುಕಿನಲ್ಲಿ ಅಡಗಿರುವ ಅನುಭವದ ಬಂಗಾರ ಸಿಗುತ್ತದೆ.

ಮಹಾಭಾರತದ ಪಾತ್ರಗಳಿಗಂತೂ ನೂರು ಬಣ್ಣ, ಮನುಷ್ಯಲೋಕದ ಮಾದರಿಗಳು ಅಲ್ಲಿವೆ. ತನ್ನ ಕಾಲಕ್ಕಿಂತ ಮುಂದೆ ಯೋಚಿಸುವ ಮುನ್ನೋಟದ ಧರ್ಮರಾಜ, ಆಧುನಿಕ ಮನಸ್ಸಿಗೆ ಹತ್ತಿರವಾಗುವ ಭೀಮ, ಸಂಕೀರ್ಣ ದೌಷ್ಪದ ದುಧನ, ಒಳ್ಳೆಯ ಮನುಷ್ಯನಾದ ಬಲರಾಮ, ಆರ್ಥೈಸಿದಷ್ಟು ವೈವಿಧ್ಯ ಮಯನಾಗುವ ಕೃಷ್ಣ, ಕಿರಿಯರ ಸಂಘರ್ಷದ ಮಧ್ಯೆ ಸಿಕ್ಕಿ ಕಷ್ಟಪಡುವ ಭೀಷ್ಮ, ದ್ರೋಣ, ವಿದುರರು ಇವೆಲ್ಲ ಸೃಷ್ಟಿಶೀಲನಿಗೆ ಸವಾಲುಗಳು. ಪ್ರತಿಯೊಂದು ಪಾತ್ರಕ್ಕೂ ವಿವಿಧ ದ್ವಂದ್ವಗಳು, ವಿಚಿತ್ರ ಗತಿಗಳು, ಸಮಗ್ರ ಮನುಷ್ಯ ಜೀವನದ ಬಗೆಗೆ ಕ್ರಾಂತಿಕಾರಿ ಚಿಂತನವುಳ್ಳ ಕೃಷ್ಣನ ಪಾತ್ರವಂತೂ ಯಾವ ಕಲಾವಿದನಿಗೂ ಅತೃಪ್ತಿಯನ್ನು ಉಳಿಸುವಂತಹದು.

ಕಂಸ, ಹಿರಣ್ಯಕಶ್ಯಪ, ರಾವಣರ ಮನಸ್ಸಿನ ಸಂಘರ್ಷ ಬೇರೊಂದು ತರಹ. ಬರಿಯ ಸರಳ ಖಳನಾಯಕ ಪಾತ್ರಗಳಲ್ಲ ಇವು, ದೀರ್ಘತಮ, ಅಗತ್ಯ, ವಿಶ್ವಾಮಿತ್ರ, ಪರಾಶರ, ಶಂತನು, ಆಹ ಇವರ ಕತೆಗಳು, ಇವು