ಪುಟ:Kedage.pdf/೮೪

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

72/ ಕೇದಗೆ

ಹೊಸ ಸೃಷ್ಟಿಯನ್ನು ಮಾಡುವಾಗ, ಬಹಳಷ್ಟು ಎಚ್ಚರವೂ, ಸಿದ್ಧತೆ ತೆಯ ಬೇಕು, ಕತೆಯೊಂದನ್ನು ಪದ್ಯಗಳಾಗಿ ಬರೆದರೆ, ಹೊಸ ಪ್ರಸಂಗವಾಗಲಿ,ಹೊಸ ಪ್ರಯೋಗವಾಗಲಿ ಆಗಲಾರದು, ಪ್ರಸಂಗವನ್ನು ಬರೆಯುವವನಿಗೂ, ಆಡುವವನಿಗೂ ಅಲ್ಲಿ ಪಂಥಾಹ್ವಾನವಿದೆ, ಹೊಣೆಗಾರಿಕೆಯಿದೆ. ಅದನ್ನು ನಿರ್ವಹಿಸದೆ 'ಬದಲಾವಣೆಯ ವೇದಾಂತವನ್ನು ಮಾತನಾಡುವುದು ವಂಚಕತನ' ವಾಗುತ್ತದೆ. ಹೊಸಪ್ರಯೋಗವೆಂಬುದನ್ನು ಯಕ್ಷಗಾನದ ಸ್ವರೂಪ ಸ್ವಭಾವಗಳ ಜಾಯಮಾನಕ್ಕೆ ಹೊಂದಿಸುವ ಕೆಲಸ ಬಹಳ ದೊಡ್ಡದು. ಅದಕ್ಕೆ ಸಮಗ್ರವಾದ ರಂಗದೃಷ್ಟಿ ಅಗತ್ಯ, ಅವಶ್ಯ.

ತುಳು ಯಕ್ಷಗಾನಗಳು ಪ್ರಯುಕ್ತವಾದುದೇ ಕಲೇತರ ಕಾರಣಗಳಿಂದಾಗಿ, ಕಲೇತರವಾದ ವ್ಯಾವಹಾರಿಕ ಯಶಸ್ಸಿನ ವ್ಯಾಪಾರದ ಪ್ರೇರಣೆಗಳಿಂದಾಗಿ, ಆದುದರಿಂದ ಆ ಕಡೆಗೆ ಲಕ್ಷ್ಯ ಹರಿಯಿತೇ ಹೊರತು ಸಾಂಗೋಪಾಂಗವಾದ ಒಂದು ನಿಜವಾದ ನಾವೀನ್ಯವನ್ನು ರಂಗಕ್ಕೆ ನೀಡುವ ಕಡೆಗೆ ಹರಿಯಲಿಲ್ಲ. ಬಯಲಾಟವನ್ನು ವೈದಿಕ, ಪೌರಾಣಿಕಸಂಸ್ಕೃತಿಯ ಚೌಕಟ್ಟಿನಿಂದ ಬಿಡಿಸಿ, ಅದಕ್ಕೆ ಜನಪದದ ವ್ಯಾಪಕತೆಯನ್ನೋ, ನವೀನ ಆಶಯವನ್ನೂ ನೀಡುವ ಕೆಲಸಕ್ಯಾಗಿಯೂ ತುಳು ಪ್ರಯೋಗವಾದದ್ದಲ್ಲ. ಹೌದಾಗಿದ್ದರೆ ಪೌರಾಣಿಕ ಪ್ರಸಂಗಗಳಿಗಿಂತಲೂ ಸಾಧಾರಣವೆನಿಸುವ ಮೌಲ್ಯಗಳನ್ನೋ, ಆಶಯಗಳನ್ನೂ ಅವು ಬಿಂಬಿಸುತ್ತಿರಲಿಲ್ಲ. ಆದುದರಿಂದ ಪ್ರಾಯೋಗಿಕ ರಂಗಭೂಮಿಯನ್ನು ವಿರೋಧಿಸುವ ಕಟ್ಟಾ ಸಂಪ್ರದಾಯವಾದಿಯ ಮುಂದೆ ಮಂಡಿಸಬಹುದಾದ ಗಂಭೀರವಾದ ಪ್ರತಿವಾದವು ತುಳು ಯಕ್ಷಗಾನದ ಸಂದರ್ಭಕ್ಕೆ ಪ್ರಸ್ತುತವೆನಿಸಲಾರದು.

ಇಲ್ಲಿರುವ ಸಮಸ್ಯೆ ಇಷ್ಟೆ. ತುಳು ಯಕ್ಷಗಾನವೆಂಬುದು ತುಳುವೂ ಆಗಬೇಕು, ಅಷ್ಟೇ ಅಲ್ಲ, ಅದಕ್ಕಿಂತ ಮುಖ್ಯವಾಗಿ ಅದು ಯಕ್ಷಗಾನವೂ ಆಗಬೇಕು ಎನ್ನುವುದು. ಸದ್ಯದ ಸ್ಥಿತಿಯಲ್ಲಿ ತುಳು ಆಟವಾಡಿದರೆ ಅದು ಯಕ್ಷಗಾನವಾಗುವುದಿಲ್ಲ. ಯಕ್ಷಗಾನವಾಗಿಸಿ ಆಡಿಸಿದರೆ ಅದು ತುಳುವಾಗಿರುವುದಿಲ್ಲ ಎಂಬಂತಹ ಒಂದು ಸ್ಥಿತಿ ನಿರ್ಮಾಣವಾಗಿದೆ. ಏಕೆಂದರೆ ತುಳುನಾಡಿನ ಬದುಕಿಗೆ ಸಂಬಂಧಿಸಿದ ಕತೆಗಳಿಗೆ ಪರಂಪರಾಗತ ವೇಷಭೂಷಣಗಳು ಹೊಂದಿಕೆಯಾಗುವುದಿಲ್ಲ. ಒಪ್ಪುವುದಿಲ್ಲ ಎಂಬ ಸಿದ್ದಾಂತವಿರುವುದನ್ನು ಕೇಳುತ್ತೇವೆ.

ಇದಕ್ಕೇನು ಪರಿಹಾರ ? ಈ ಸಂದರ್ಭದಲ್ಲಿ ಇನ್ನೊಂದು ವಾದವೂ ಗಮನಾರ್ಹವಾಗಿದೆ. “ತುಳು ಮತ್ತು ಯಕ್ಷಗಾನ ಇವೆರಡಕ್ಕೂ ನ್ಯಾಯವನ್ನು ಒದಗಿಸುತ್ತೇನೆ ಎಂಬುದು ಭ್ರಾಂತಿ ಮಾತ್ರ. ಯಾವುದಾದರೂ ಒಂದನ್ನು ನಾವು ಬಿಡಲೇಬೇಕು. ತುಳು ಭಾಷೆಯು ಸತ್ವಯುತವೂ, ಸುಂದರವೂ ಹೌದು. ಆದರೆ ಯಕ್ಷಗಾನದಲ್ಲಿ ಅದನ್ನು ಕೇಳುವಾಗ ನಮಗೆ ಯಕ್ಷಗಾನದ ರಂಗ ನಿರ್ಮಾಣದ ಕಲ್ಪನೆಯೇ ಬರುವುದಿಲ್ಲ ಯಾಕೆ ? ರಂಗಸ್ಥಳವೂ ನಮ್ಮ ಊರ