ಪುಟ:Kedage.pdf/೮೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿದೆ

74/ ಕೇದಗೆ

ಉಪಯೋಗಿಸಿ ಒಂದೆರಡು ದಶಕಗಳ ಕಾಲ, ತುಳು ಯಕ್ಷಗಾನಗಳು, ಭಾಷೆಯಲ್ಲಿ ಮಾತ್ರ ತುಳುವಾಗಿ ಬರುತ್ತಿದ್ದರೆ ಈ ಗೊಂದಲವಿರುತ್ತಿರಲಿಲ್ಲ. ಎಲ್ಲವನ್ನೂ ಒಮ್ಮೆಗೇ ಬದಲಾಯಿಸಿದ್ದು, ಸಮಸ್ಯೆಗಳನ್ನು ಸೃಷ್ಟಿಸಿತು. ಇಲ್ಲವಾದರೆ ಅದು ಬೆಳೆಯುತ್ತ ಬಂದ ಹಾಗೆ ಪಾಡ್ಡನ, ಕಬಿತಗಳ ಭಾಷೆಯ ಘೋಷಣೆ ಪಡೆದು, ಯಕ್ಷಗಾನಕ್ಕೆ ಒದಗಿ ಬಂದು, ಬದಲಾವಣೆಯೆಂಬುದು ನಾಜೂಕಾಗಿ, ಯಶಸ್ವಿಯಾಗುತ್ತಿತ್ತು" ಎಂದು ಅವರ ಮತ. ಸಮಸ್ಯೆಗೆ ನಿಜವಾದ ಪರಿಹಾರದ ದಾರಿ ಇಲ್ಲೆ ಇದೆ ಎಂದು ತೋರುತ್ತದೆ. ಬಹುಕಾಲ ಬೆಳೆದು ನಿಂತ ಯಕ್ಷಗಾನದ ಎಲ್ಲ ಅಂಗಗಳನ್ನು ಬಳಸಿಕೊಂಡೇ ತುಳು ಯಕ್ಷಗಾನ ಆರಂಭವಾಗಬೇಕಿತ್ತು, ಆಗಲಿಲ್ಲ ಎಂಬುದು ದುರ್ದೈವ.

ಕಳಪೆಯೆಂದಾಗಲಿ ಆಗಿವೆ. ಇನ್ನು ಪೌರಾಣಿಕ ಕತೆಗಳೇ ಶ್ರೇಷ್ಠವೆಂದಾಗಲಿ, ಸ್ಥಳೀಯ ಪುರಾಣಗಳು ಹೇಳುವುದು ಸಾಂಸ್ಕೃತಿಕ ದೃಷ್ಟಿ ವೈಶಾಲ್ಯ ಇಲ್ಲದವನ ಮಾತಾಗುತ್ತದೆ. ಎಲ್ಲ ಪುರಾಣಗಳೂ, ಜಾನಪದ ಸಂಪ್ರದಾಯಗಳೂ ಶ್ರೇಷ್ಠವೇ ಆಗಿವೆ. ಒಂದೊಂದು ನಿಟ್ಟಿನಲ್ಲಿ ವಿಶಿಷ್ಟವೂ ಆಗಿವೆ. ಯಕ್ಷಗಾನದ ವೇಷ, ನೃತ್ಯ, ಗಾನಗಳಿಗೂ, ರಂಗಭೂಮಿಯ ಅಪೇಕ್ಷಿತ ಆವಶ್ಯಕತೆಗಳಿಗೂ ಸರಿಬರುವುದಾದರೆ ಯಾವ ಕಥೆಯಾದರೂ ಯೋಗ್ಯವೇ ಆಗಿದೆ. ಪೌರಾಣಿಕ ಪರಿಕಲ್ಪನೆ ಗಳಾಗಲಿ, ಪ್ರತಿಮೆಗಳಾಗಲಿ ತುಳುವಿನಲ್ಲಿ ಬೆಳೆದು ಬಾರದಿದ್ದರೆ ಅದು ಕೊರತೆ ಯಲ್ಲ, ಅದಕ್ಕೆ ಕಾರಣಗಳಿರಬಹುದು. ಅದರ ಕಡೆ ಗಮನ ಹರಿಸಿ ಬೆಳೆಸಿ ಕೊಳ್ಳುವುದವಶ್ಯ, ಲೇಖಕರೂ, ಪ್ರಾಚೀನ ಸಾಹಿತ್ಯ ಸಂಗ್ರಾಹಕರೂ ಇದಕ್ಕೆ ಹಿನ್ನೆಲೆ ಒದಗಿಸಬೇಕು.

ಇನ್ನೊಂದು ಮುಖ್ಯವಾದ ಅಂಶವೆಂದರೆ, ಈ ನಮ್ಮ ಜಿಲ್ಲೆಯಲ್ಲಿ ತುಳು ಕನ್ನಡಗಳೆಂಬ ಎರಡು ಭಾಷೆಗಳಿರುವರಿಂದಲೇ ನಾವು ಹೋಲಿಸುವ ಪ್ರಮೇಯ. ಒಂದು ವೇಳೆ, ತುಳು ಭಾಷೆ ಮಾತ್ರ ಇಲ್ಲಿ ಇರುತ್ತಿದ್ದರೆ, ಆಗ ಯಕ್ಷಗಾನ (ಅಥವಾ ಅಂತಹ ಒಂದು ಕಲೆ) ರೂಪುಗೊಂಡು ಆ ರಂಗಕ್ಕೆ ಬೇಕಾದ ತುಳುವನ್ನೆ ಬೆಳೆಸುತ್ತಿರಲಿಲ್ಲವೇ? ಖಂಡಿತವಾಗಿಯೂ ಅದು ತುಳು ಯಕ್ಷಗಾನವೇ ಆಗಿರುತ್ತಿತ್ತು. ಆದರೆ ಇಂದೀಗ, ತುಳುಭಾಷಾಮಾಧ್ಯಮದಿಂದಾಗಿ ಯಕ್ಷಗಾನದ ಮೂಲಸತ್ತ್ವಕ್ಕೆ ಆಘಾತವಾಗುವ ಪರಿಸ್ಥಿತಿ ಬಂದುದರಿಂದ ಮಾತ್ರ ಆಕ್ಷೇಪವೇ ಹೊರತು ಭಾಷೆಯ ಬಗೆಗೆ ಅನಾದರವಾಗಲಿ, ಸಾಂಸ್ಕ್ರತಿಕ ಪಕ್ಷಪಾತವಾಗಲಿ ಕಾರಣವಲ್ಲ. ಆಕ್ಷೇಪವು ಯಕ್ಷಗಾನದ ಅಭಿಮಾನದಿಂದಾಗಿ ಮಾತ್ರ.

ಹಾಗೆ ನೋಡಿದರೆ ಒಳ್ಳೆಯ ಕಲೆ ಪ್ರಾದೇಶಿಕವೇ ಆಗಿರುತ್ತದೆ. 'ಕಲೆಯದು ವಿಶ್ವಬಾಶೆ'ಎಂಬುದು ಒಂದು ಮುಖ. ಕಲೆಯ ಅತ್ಯಂತ ಪ್ರಾದೇಶಿಕ,