ಪುಟ:Mahakhshatriya.pdf/೧೩೭

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

``ಕನಸುಮನಸ್ಸಿನಲ್ಲಿಯೂ ನಾವು ಅನುಗ್ರಾಹ್ಯರು ; ತಾವು ಅನುಗ್ರಾಹಕರು. ದೇವ.”

“ಕಾಮಪ್ರಪಂಚವನ್ನು ಬಿಟ್ಟು ಇತರ ಪ್ರಪಂಚಗಳಲ್ಲಿ ಇದು ನಿಜ. ಅರ್ಥ ಪ್ರಪಂಚದಲ್ಲಿ ಈ ಅನುಗ್ರಾಹ್ಯ, ಅನುಗ್ರಾಹಕ ಸಂಬಂಧವು ಯಾವಾಗಲೂ ಹೆಚ್ಚು ಕಡಿಮೆಯಾಗುತ್ತಲೇ ಇರುವುದು. ಆದರೆ ಧರ್ಮಪ್ರಪಂಚ- ಕಾಮ ಪ್ರಪಂಚಗಳಲ್ಲಿ ಅದು ನಿಯತವು. ಮೊದಲನೆಯದರಲ್ಲಿ ಪತಿಯು ಅನುಗ್ರಾಹಕ. ಪತ್ನಿಯು ಅನುಗ್ರಾಹ್ಯಳು. ಕಾಮಪ್ರಪಂಚದಲ್ಲಿ ಅದಕ್ಕೆ ಪ್ರತಿ. ಪತ್ನಿಯು ಅನುಗ್ರಾಹಕಳು. ಪತಿಯು ಅನುಗ್ರಾಹ್ಯ. ಅದರಿಂದ, ಅಂತಃಪುರಗಳಲ್ಲಿ ಅದೂ ತಿರಸ್ಕರಣಿಯು ಹೊರಗಿನ ಪ್ರಪಂಚವನ್ನು ಹೊರಗೇ ಇಟ್ಟು ನಮ್ಮನ್ನು ಏಕಾಂತದಲ್ಲಿ ಬಿಟ್ಟಿರುವಾಗ, ದೇವಿಯವರು ದೊಡ್ಡ ಮನಸ್ಸು ಮಾಡಿ ಕರ್ತೃತ್ವವನ್ನು ವಹಿಸಿ, ಕರ್ತವ್ಯ ಭಾರವನ್ನು ವಹಿಸಿಕೊಂಡು, ನಮ್ಮಲ್ಲಿ ದಾಸ್ಯಭಾವವನ್ನು ಆರೋಪಿಸಿ ನಡೆಸಿಕೊಂಡರೆ ಕೃತಾರ್ಥರಾಗುವೆವು. ಹೆಣ್ಣೊಲಿದು ಹೊನಲಂತುಬ್ಬಿ ಮೈಮೇಲೆ ಬಂದರೆ ಸ್ವರ್ಗವೇ ಕೈಗೆ ಸಿಕ್ಕಿದಂಥಲ್ಲವೆ ?”

“ದೇವಾ, ಮೂರು ಲೋಕಗಳಲ್ಲಿಯೂ ತಮ್ಮಂತಹ ಧರ್ಮಜ್ಞರೂ ಧರ್ಮಿಷ್ಠರೂ ಧಾರ್ಮಿಕರೂ ಇಲ್ಲವೆನ್ನುವರು. ಧರ್ಮಬಲದಿಂದ ಸ್ವರ್ಗವನ್ನು ಗೆದ್ದವರು ತಾವು. ಬೇಕೆಂದರೆ ಇಂದ್ರಪದವಿಯನ್ನು ನಿರ್ವಹಿಸಬಲ್ಲ ತಾವು ಕೋರಿದರೆ ಸ್ವರ್ಗವು ಇಲ್ಲಿಗೆ ಬರುವುದು ಏನತಿಶಯ ?”

``ದೇವಿ, ಮಾತಿನಲ್ಲಿ ನಮ್ಮನ್ನು ಸೋಲಿಸಿದೆ. ನಾವು ಕೋರಿದರೆ ಸ್ವರ್ಗವು ಇಲ್ಲಿಗೆ ಬರುವುದು ಎಂದರೆ ತಮಗೆ ಬೇಕಾದಷ್ಟು ಸುಖವನ್ನು ನಿರ್ವಂಚನೆಯಾಗಿ ಕೊಡುವೆನು ಎಂದು ಹೇಳಿ, ನಮ್ಮನ್ನು ಬೇಡಿಕೊಳ್ಳಿ ಎಂದು ಅಪ್ಪಣೆ ಮಾಡಿದಂತಾಯಿತು. ಇಗೋ ಮಿಕ್ಕೆಲ್ಲರಿಗೂ ಸಿಂಹಾಸನಾಧೀಶ್ವರನಾಗಿ, ಭೂಮಂಡಲದ ಏಕನಾಥನಾದ ನಹುಷನು, ತಾನು ಚಕ್ರವರ್ತಿಯೆಂಬುದನ್ನು ಮರೆತು, ಮಹಾದೇವಿಯರ ಎದುರು ನಿಂತು ಸೆರಗೊಡ್ಡಿ ಬೇಡುತ್ತಿರುವೆನು. ಕಾಮಭಿಕ್ಷೆಯನ್ನು ಸರ್ವಾಂಗತೃಪ್ತಿಯಾಗುವಂತೆ, ಅಮೃತಪೂರ್ವಕವಾಗಿ ಕೊಟ್ಟು ಕಾಪಾಡಬೇಕು.”

ವಿರಜಾದೇವಿಯು ಆ ಮಾತು ಕೇಳಿ ನಕ್ಕಳು ; ‘ದೇವಾ, ಇದು ಗಂಧರ್ವ ಪ್ರಸಾದವಲ್ಲ; ರಂಗಮಂಟಪವಲ್ಲ, ಜೊತೆಗೆ ನಾನು ಪಾದಸೇವೆಗಾಗಿ ಸಿದ್ಧಳಾಗಿರುವವಳು. ನನ್ನಲ್ಲಿ ಈ ನಾಟಕದ ಮಾತುಗಳೇಕೆ ?”

“ದೇವಿ ಹಾಗಲ್ಲ, ಇದು ಸರ್ವಥಾ ನಾಟಕದ ಭಾಷೆಯಲ್ಲ. ನಾಟಕದಲ್ಲಿ