ಪುಟ:Mahakhshatriya.pdf/೧೫೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

೨೮.ಬೀಳುವುದು ಏಳುವುದಕ್ಕೆ

ದೇವಸಭೆಯು ದೇವಾಚಾರ್ಯನ ಅಧ್ಯಕ್ಷತೆಯಲ್ಲಿ ಸೇರಿದೆ. ಪಿತೃಗಣಗಳೂ ಋಷಿಗಣಗಳೂ ವಿಶೇಷಾಹ್ವಾನದ ಮೇಲೆ ಬಂದಿದ್ದಾರೆ. ಅಗ್ನಿ ವಾಯುಗಳು ಮಾತ್ರ ಕಾರಣಾಂತರದಿಂದ ತಾವು ಬರುವುದಕ್ಕಾಗುವುದಿಲ್ಲವೆಂದೂ, ಸಭೆಯ ನಿರ್ಣಯಗಳಿಗೆ ತಮ್ಮ ಒಪ್ಪಿಗೆಯುಂಟೆಂದೂ ಬಿನ್ನವಿಸಿಕೊಂಡಿದ್ದಾರೆ. ಸಭೆಯು ಸಕಾಲದಲ್ಲಿ ಆರಂಭವಾಯಿತು.

ಅಧ್ಯಕ್ಷರು ಎದ್ದು ಸಭೆಯನ್ನು ಸಂಬೋಧಿಸಿ, “ಮಾನ್ಯರೆ, ಇಂದು ಈ ಸಭೆಯು ಸೇರಿರುವ ಉದ್ದೇಶವು ತಮಗೆಲ್ಲ ತಿಳಿದೇ ಇದೆ. ಈಗಿನ ದೆವೇಂದ್ರನು ತನ್ನ ಅಧೀಕಾರ ಪೂರ್ಣವಾಗಿದೆಯೇ ಎಂಬ ಪ್ರಶ್ನವನ್ನು ಎತ್ತಿದ್ದಾನೆ. ಆತನು ನನ್ನನ್ನು ಕೇಳಿದಾಗ, ‘ನಾನು ಶಚೀಪತಿತ್ವವಿಲ್ಲದ ಇಂದ್ರತ್ವವು ಪೂರ್ಣವಾಗುವುದಿಲ್ಲ’ ಎಂದು ಹೇಳಬೇಕಾಯಿತು. ಹೇಳಿದೆ. ಈಗ ಆ ಇಂದ್ರತ್ವವು ಪೂರ್ಣವಾಗಬೇಕಾದರೆ ಏನು ಮಾಡಬೇಕೋ ಅದನ್ನು ಗೊತ್ತು ಮಾಡುವುದು ಈ ಸಭೆಯ ಕೆಲಸ” ಎಂದು ಹೇಳಿ ಕುಳಿತನು.

ಒಬ್ಬ ದೇವತೆಯು ಎದ್ದು ಹೇಳಿದನು : “ಇಂದ್ರಪದವಿಗೆ ಬೇಕಾದ ಅಧಿಕಾರವೂ ಗೌರವವೂ ಪೂರ್ಣವಾಗಿದೆಯೆಂದೇ ನನ್ನ ನಂಬಿಕೆ. ಪ್ರತಿದಿನವೂ ದೇವಗಂಗಾದಿಗಳು ಸ್ನಾನಕ್ಕೆ ನೀರನ್ನು ಒದಗಿಸುತ್ತಿವೆ. ಕಲ್ಪವೃಕ್ಷಗಳು ದಿನವೂ ಬೇಕಾದ ದಿವ್ಯವಸ್ತ್ರಗಳನ್ನು ತಂದೊಪ್ಪಿಸುತ್ತಿವೆ. ಚಿಂತಾಮಣಿಯು ಬೇಕಾದ ದಿವ್ಯಾಭರಣಗಳನ್ನು ತಂದು ನೀಡುತ್ತಿದೆ. ಅಪ್ಸರೆಯರು ತಮ್ಮನ್ನೇ ಒಪ್ಪಿಸಿಕೊಂಡು ಆರಾಧಿಸುತ್ತಿದ್ದಾರೆ. ಗಂಧರ್ವಗಣಗಳು ನೃತ್ಯಗೀತಾದಿ ಸೇವೆಯನ್ನು ಒಪ್ಪಿಸುತ್ತಿವೆ. ಪಿತೃಗಣಗಳು ಓಲೈಸುತ್ತಿದ್ದಾರೆ. ಋಷಿಗಣವು ಆಶೀರ್ವಾದ ಮಾಡುತ್ತಿವೆ. ಕರ್ಮಬ್ರಹ್ಮಸ್ವರೂಪನಾದ ಅಗ್ನಿಯೂ ಮಾತರಿಶ್ವನಾದ ವಾಯುವೂ ಸೇವಿಸುತ್ತಿದ್ದಾರೆ. ಇನ್ನೇನಾಗಬೇಕು ! ಮಾನವೇಂದ್ರನು ಮಹೇಂದ್ರನಾದಾಗ ಏನೇನು ಅಧಿಕಾರಗಳನ್ನು ಕೊಡಬಹುದೋ ಅದೆಲ್ಲವನ್ನೂ ಕೊಟ್ಟೇ ಇದೆ. ಅದರಿಂದ ಈ ಪ್ರಶ್ನವೇ ಏಳುವುದಿಲ್ಲ.”

ಇನ್ನೊಬ್ಬರು ಹೇಳಿದರು : “ಇಂದ್ರತ್ವವು ಪೂರ್ಣವಾಗಿದೆಯೇ ಎಂದು