ಪುಟ:Mahakhshatriya.pdf/೧೬೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

`ವಿರಜಾದೇವಿಯು ಅನ್ಯಮನಸ್ಕಳಾಗಿದ್ದವಳು “ನಿಜ ಶಚಿಯು ಸಿಕ್ಕಿದರೂ ಕೆಲಸ ಕೆಟ್ಟಿತು. ಸಿಕ್ಕದಿದ್ದರೂ ಕೆಲಸ ಕೆಟ್ಟಿತು. ಅದಿರಲಿ, ತಮ್ಮನ್ನು ಶಚಿಯು ಒಲಿದರೆ ನನ್ನ ಗತಿಯೆನು ?” ಎಂದಳು.

`ಅರಸನಿಗೆ ಹೋಗಿದ್ದ ಅಸುವು ಬಂತು : “ಶಚಿಯು ಒಲಿದರೂ ನಾನು ಒಲಿಯುವುದಿಲ್ಲ. ನಾನು ಗ್ರಹಚಾರವಶನಾಗಿ ಒಲಿದರೂ, ಅವಳು ಅರ್ಥಪತ್ನಿ, ನೀನು ಧರ್ಮಪತ್ನಿ. ಹಾನಿಯೆಲ್ಲ ನನ್ನದು. ನಿನಗೆ ಎಳ್ಳಷ್ಟೂ ಹಾನಿಯಿಲ್ಲ. ಇದು ನನ್ನ ವರ ಸಾಕೇ?”

`* * * *