ಪುಟ:Mahakhshatriya.pdf/೬೬

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಆನಂದದಿಂದ ಸಂತೃಪ್ತನಾಗಿ ಹೊರಟು ಹೋದನು.

ಮತ್ತೆ ದಧೀಚಿಯು ಮುಂಚಿನಂತೆ ಚತುರ್ಭೂತಗಳನ್ನು ಒಂದೊಂದಾಗಿ ದಾಟಿ ಆಕಾಶಕ್ಕೆ ಬಂದು ಅದರ ವಿಲಯನ ಗತಿಯನ್ನು ದಾಟಿ, ಅಲ್ಲಿ ಜ್ಞಾತೃ ಭಾವವನ್ನು ಬಿಟ್ಟು ಬ್ರಹ್ಮಾಂಡಗತಿಯನ್ನು ಮೀರಿದನು. ಇತ್ತ ಕ್ಷರಪುರುಷನು ಕಾಮಧೇನುವಿಗೆ ಆಜ್ಞೆಯನ್ನು ಕೊಟ್ಟನು. ಆಕೆಯು ನೆಕ್ಕಿ ನೆಕ್ಕಿ ಬೆನ್ನುಮೂಳೆಯನ್ನು ಬಿಡಿಸಿದಳು. ದೇವರಾಜನ ಕಡೆಯವರು ಆ ಮೂಳೆಯನ್ನು ಅಲ್ಲಿಂದ ತೆಗೆದುಕೊಂಡು ಹೋಗಿ ವಿಶ್ವಕರ್ಮನಿಗೆ ಒಪ್ಪಿಸಿದರು. ಆತನು ಅದು ಒಣಗುವುದರೊಳಗೆ ಅದನ್ನು ಕಡೆದು, ಅಸ್ತ್ರಶಸ್ತ್ರರಾಜನಾದ ಆಯುಧವನ್ನು ಸಿದ್ಧಮಾಡಿ ಅದಕ್ಕೆ ವಜ್ರವೆಂದು ಹೆಸರಿಟ್ಟನು. ದೇವರಾಜನು ಅದರ ತೇಜಸ್ಸು ನೋಡಿ ಸಂತೋಷಪಟ್ಟು ಅದನ್ನು ಧರಿಸಿ ವಜ್ರಹಸ್ತನೆಂದು ಹೊಗಳಿಸಿಕೊಂಡನು.

* * * *