ವಿಷಯಕ್ಕೆ ಹೋಗು

ಪುಟ:Shataka Samputa.pdf/೮೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

೮೩

ತರಳತನದಿಂದರಲು ಬಳಿಕ ಯೌವನ ಬರಲು

ತರುಣಿ ಸುತರಾಗಲವರನು ಸಲಹಬೇಕೆನುತ

ಪರಿಪರಿಯ ಧಾವತಿಯ ನೆಗಳಿ ಬಳಬಳಲಿ ನಾನಾಯೋಚನೆಯನೆಸಗುತ

ಇರಲನಿತರೊಳು ಸತಿಯು ಸುತರು ಮರಣಂಗೈಯೆ

ಪರಮಶೋಕಾತುರದಿ ನೊಂದು ಚಿಂತಿಸುವ ಕರ

ಕರಿಯು ಪೇಳುವರಳವೆ ನಿಜಲಿಂಗ ಭವಭಂಗ ಶರಣಜನವರದ ಜಯತು || ೭೯ ||


ಬದುಕುಮನೆಮಾಡಿಕೊಂಡಿರೆ ಜರಾಂಗನೆಯು ತಾ

ನೊದಗಲಾಕ್ಷಣದಲ್ಲಿ ಪಂಚೇಂದ್ರಿಯಗಳು

ಹದಗೆಡಲು ಸತಿಸುತರು ಮುದಿಪಾಪಿ ತಾಸಾಯಲೊಲ್ಲನು ಯೆಂದು ಹಳಿಯು ತಿರಲು

ಇದು ಹೊರತು ಮರಣಗಾಲದೊಳೊಂದು ವ್ಯಾಧಿಯೊಳು

ಕುದಿಕುದಿದು ಪ್ರಾಣವನು ಬಿಡಬೇಕು ಸತ್ತುಹು

ಟ್ಟದ ಬಗೆಯ ಮಾಡು7ವುದು ನಿಜಲಿಂಗ ಭವಭಂಗ ಶರಣಜನವರದ ಜಯತು || ೮೦ ||


ರೂಢಿಯೊಳಗೆಂತು ಜೀವಿಸಬೇಕು ಚಿತ್ತೈಸು

ಚಾಡಿಕೋರರು ಚೋರರುಗಳು ಸಿರಿವಂತರಡಿ8

ನೋಡಿ ಬಳಲುವ ದುರಾಚಾರಿಗಳು ಪಾಪಿಗಳು ದುರ್ಜನರು ದಯಹೀನರು

ಕೂಡಿ ನಡೆವಲ್ಲಿ ಭೇದವನಿಕ್ಕುವರು ಪರರ್ಗೆ

ಕೇಡನೆಣಿಸುವರು ಕುಟಿಲರು ಕುಹಕಿಗಳು ಶಶಿಯ

ಸೂಡಿದನೆ ಸುಚರಿತ್ರ ನಿಜಲಿಂಗ ಭವಭಂಗ ಶರಣಜನವರದ ಜಯತು || ೮೧ ||


ಒಡವೆಯಾಸೆಗೆ ಬಾಲಕರ ಕೊರಳ ಛೇದಿಪರು

ಬಿಡದೆ ಸವತಿಯ ಶಿಶುವ ಬಾವಿಯೊಳು ಕೆಡಹುವರು

ಕಡೆಗೆ ಧನಬರಲೆಂದು ಗರ್ಭಿಣಿಯ ಕೊಂಡೊಯ್ದು ಕಡಿಕಡಿದು ಕೊಲ್ಲುತಿಹರು

ಕಡುವಿಷವನಿಕ್ಕಿ ಮಲಮಕ್ಕಳನು ಕೊಲುತಿಹರು

ಕೊಡುವ ಧರ್ಮವ ಮಾಣಿಸುವರು ನಿಷ್ಕರುಣಿಗಳು

ನುಡಿದು ಪೇಳುವರಳವೆ ನಿಜಲಿಂಗ ಭವಭಂಗ ಶರಣಜನವರದ ಜಯತು || ೮೨ ||