ಈ ಪುಟವನ್ನು ಪರಿಶೀಲಿಸಲಾಗಿಲ್ಲ.
ನೀತಿ ಕಥೆಗಳು
159
ಹಾಗೆ ಬಿಗಿಹಿಡಿಯುವಾಗ, ಹುಣ್ಣು ಬಿದ್ದಿದ್ದರಿಂದ ಅಸಹ್ಯವಾದ ನೋವುಂಟಾಗುವದು. ಅದೆಷ್ಟು ರಭಸದಿಂದ ಚಂಗನೆ ನೆಗೆದು ಬಂದವರ ಮೈಮೇಲೆ ಹೋಗುವದೋ, ಅಷ್ಟೇ ವೇದನೆಯಿಂದ ``ಆಂ„„„ ಎಂದು ನರಳಿ ಹಿಂದಿರುಗಿ ಬರತೊಡಗಿತು.
ಗುದದ್ವಾರದಲ್ಲಿ ಬಿದ್ದ ಹುಣ್ಣಿನ ನೋವಿಗಂಜಿ ಅದು, ರಭಸದಿಂದ ಬೊಗಳಿ ಬಂದವರ ಮೇಲೆ ಹೋಗುವುದನ್ನು ಒಮ್ಮೆಲೇ ಕಡಿಮೆ ಮಾಡಿತು. ಅಲ್ಲಿಯವರಿಗೆ ಆ ಹುಣ್ಣು ಮಾಯಿಸುವ ಉಪಾಯವನ್ನೇ ಮಾಡಲಿಲ್ಲ ಗೌಡರು.
``ಕಳೆನೋಡಿ ಕೇರು ಹಾಕಿದರೆ ಹಾದಿಗೆ ಬಾರದವರಾರು ಎಂದು ಗೌಡರು ಮೇಲಿಂದ ಮೇಲೆ ಮಾತಿನಲ್ಲಿ ನುಡಿಯತೊಡಗಿದರು. ಕೇಳಿದವರಿಗೆ ಅದು ಸತ್ಯವೂ ಅನಿಸಿತು.