ಪುಟ:YASHODARA CHARITE.pdf/೧೨೫

ವಿಕಿಸೋರ್ಸ್ದಿಂದ
ಈ ಪುಟವನ್ನು ಪರಿಶೀಲಿಸಲಾಗಿಲ್ಲ.

೧೨೪

ಯಶೋಧರ ಚರಿತೆ


ಅರ್ಥಮಾಡುತ್ತಾರೆ. ಅದಕ್ಕೆ ಉತ್ಪಾತ ಎಂಬರ್ಥವೂ ಆಗಬಹುದೆಂದು ಹೇಳುವವರೂ ಇದ್ದಾರೆ.

25. ಭರತಖಂಡದ ಮಧ್ಯರೇಖೆ ನರ್ಮದಾನದಿ. ಈ ನದಿಯ ಉತ್ತರಕ್ಕೆ ಆರ್ಯಾವರ್ತವಿದ್ದರೆ, ದಕ್ಷಿಣಕ್ಕೆ ದಕ್ಷಿಣಾಪಥವಿದೆ. ಧರ್ಮವು ಆರ್ಯಾವರ್ತದಲ್ಲಿದ್ದಂತೆ ದಕ್ಷಿಣಾಪಥದಲ್ಲಿಲ್ಲವೆಂಬ ಅಭಿಪ್ರಾಯವು ಹಿಂದೆ ಆರ್ಯಾವರ್ತದವರಲ್ಲಿದ್ದಿರಬಹುದು. ಅಯೋಧ್ಯೆಯಲ್ಲಿ ಈ ಘಟನೆ ನಡೆಯುವ ಸಂಧರ್ಭದಲ್ಲಿ ಈ ಮಾತು ಬರುವುದರಿಂದ ಧರ್ಮಾಸಕ್ತಿ ಮಾರಿದತ್ತನಿಂದ ದೂರವಾಗಿದೆಯೆಂದು ತಾತ್ಪರ್ಯ. ಅಯೋಧ್ಯೆಯಿಂದ ನರ್ಮದೆ ಬಹಳ ದೂರದಲ್ಲಿರುವುದರಿಂದ ಅರಸನು ಈ ರೀತಿ ಧರ್ಮದೂರನಾಗಿದ್ದಾನೆಂದು ಹೇಳುವುದೂ ಇರಬಹುದು.

26. ಚಂದ್ರೋದಯವಾಗುವಾಗ ಕತ್ತಲೆಯೂ ತೊಲಗುತ್ತದೆ; ತಾವರೆಗಳಿಂದ ಭ್ರಮರಗಳೂ ತೊಲಗುತ್ತವೆ. ಏಕೆಂದರೆ ಅವು ಆಗ ಮುಚ್ಚಿಕೊಳ್ಳುತ್ತವೆ. ಇಲ್ಲಿ, ರಾಜನಿಗೆ ಅಭಯರುಚಿಯ ಮಾತು ಕೇಳುತ್ತಿದ್ದಂತೆ ಪಾಪ ಪರಿಹಾರವಾಗಿ, ಅವನ ಕೈಗಳು ತಾವಾಗಿಯೇ ಮುಗಿದುಕೊಂಡವು. ಅವನು ಅಭಯರುಚಿಗೆ ಕೈಮುಗಿದನು ಎಂದು ಭಾವ.

27. ಕಾಲಲಬ್ಧಿ-ಪಕ್ಷತೆಯನ್ನು ಪಡೆಯುವ ಕಾಲ; ಒಳ್ಳೆಯ ಕಾಲ ಬಂದೊದಗುವುದು. ಆಗ ಸ್ವಾಭಾವಿಕವಾಗಿ ಕೆಡಕುಂಟಾಗದು.

28. ಭವ್ಯರು ಎಂದರೆ ರತ್ನತ್ರಯ (ಸಮ್ಯಗ್ಜ್ಞಾನ, ಸಮ್ಯಗ್ದರ್ಶನ ಮತ್ತು ಸಮ್ಯಕ್ಚಾರಿತ್ಯ್ರ)ದಿಂದ ಪರಿಣತನಾಗುವ ಜೀವಿ. ಇಲ್ಲಿ ಮಾರಿದತ್ತನು ಭವ್ಯ, ಅವನೇ ಪ್ರಭು ಎಂದರೆ ಅರಸನು. ಅವನು ಕೂಡಿಸಿದ ಸಭೆಯಾದುದರಿಂದ ಅದು ಭವ್ಯ ಪ್ರಭು ಸಭೆ. ಇಲ್ಲಿ ಇನ್ನೊಂದು ರೀತಿಯಲ್ಲೂ ಅರ್ಥ ಹೇಳುತ್ತಾರೆ: ಭವ್ಯರಿಗೆಲ್ಲ ಅರಸನಂತೆ ಶ್ರೇಷ್ಠನಾದವನು ಮಾರಿದತ್ತ. ಅವನ ಸಭೆಯೇ ಭವ್ಯಪ್ರಭುಸಭೆ.

29. ಯಶೌಘನು ಚಂದ್ರಮತಿಯನ್ನು ಅಂಗರಕ್ಷಕರಂತೆ ನೋಡಿ ಕೊಳ್ಳುತ್ತಿದ್ದನೆಂದೂ, ಅವನ ಸಂತುಷ್ಟ ಚಿತ್ರವೇ ಆಭರಣವೆಂಬಂತೆ ಅವಳು ಗ್ರಹಿಸುತ್ತಿದ್ದಳೆಂದೂ ಆಕೆಗೆ ರಾಜಲಕ್ಷ್ಮಿಯೇ ಒಡನಾಡಿಯಾಗಿದ್ದಳೆಂದೂ ಇದರ ಭಾವ. ಇಲ್ಲಿ ಅರಸಿತವನ್ನು ಮೆರೆಯಿಸುವಾಗ ರಾಣಿಗೆ ಬೇಕಾದ ಅಂಗರಕ್ಷಕರ, ಆಭರಣಗಳ, ಜತೆಗಾರರ ಪ್ರಸ್ತಾಪವಿರುವುದನ್ನು ಅಲಂಕಾರಿಕವಾಗಿ ಹೇಳಲಾಗಿದೆ.

30. ಕಾಮನಿಗೆ ಕಬ್ಬೇ ಬಿಲ್ಲೆಂದೂ ಆ ಬಿಲ್ಲೆಗೆ ಎಳೆಯ ಮೊಗ್ಗೆಗಳೇ ಕಟ