೪೬
ಯಶೋಧರ ಚರಿತೆ
ಸುರತ ಸುಖಪಾರವಶ್ಯಂ
ತರೆ ನಿದ್ರಾಭರಮನಿರ್ವರುಂ ಶಿಥಿಲತನೂ
ಪರಿರಂಭಣದಚ್ಚಳಿಯದೆ
ಪರಿವೇಷ್ಟಿತ ಬಾಹುವಳಯದೊಳ್ ಕಣ್ಗಯ್ದರ್ 25
ಪುರ್ವೆಂಬ ಜವಳಿಗಟ್ಟಿನ
ಕರ್ವಿನ ಬಿಲ್ಲಿಂಗೆ ಬಿಗಿದ ಮಧುಕರಮಾಲಾ
ಮೌರ್ವಿಯೆನೆ ಮುಗಿದ ಕಣ್ಗಳ
ಪರ್ವುಗೆಯೊಳ್ ಮೆರೆದುದವರ ತಳ್ತೆಮೆದುರುಗಲ್ 26
ಹೃದಯ ಪ್ರಿಯರಂತೊರಗಿದ
ಪದದೊಳ್ ಗರಟಿಗೆಯ ಜಾವದುಕ್ಕಡದುಲಿ ಮ
ಗ್ಗಿದ ಪೊತ್ತು ಸೂಳ್ಗೆ ಕರುಮಾ
ಡದ ಪಕ್ಕದೊಳಿರ್ದ ಪಟ್ಟದಾನೆಯ ಬದಗಂ 27
_____
ಪರವಶತೆಯನ್ನುಂಟುಮಾಡಿತು. ಆಗ ಅವರು ಶರೀರಾಲಿಂಗನದ ಬಿಗಿ ತಪ್ಪಿದರೂ, ಅಚ್ಚಳಿಯದೆ ಪರಸ್ಪರರ ತೋಳುಗಳು ಹೆಣೆದುಕೊಂಡು ನಿದ್ರಾ ಮುದ್ರಿತರಾದರು. 26. ಗಾಢ ನಿದ್ರೆಯಲ್ಲಿ ಮುಳುಗಿದ ಅವರ ಕಣ್ಣುಗಳು ಮುಚ್ಚಿಕೊಂಡಿದ್ದಾಗ ಅವರ ಹುಬ್ಬು ಎರಡು ಕಬ್ಬುಗಳನ್ನು ಕೂಡಿಸಿ ಕಟ್ಟಿದ ಬಿಲ್ಲಿನಂತೆ ಭಾಸವಾಗುತ್ತಿತ್ತು. ಹೀಗೆ ಕಟ್ಟಿದ ಬಿಲ್ಲಿಗೆ ಹೆದೆಯನ್ನಾಗಿ ಭ್ರಮರ ಮಾಲೆಯನ್ನು ಬಿಗಿದಂತೆ ಅವರ ರೆಪ್ಪೆಯ ರೋಮಗಳು ಮೆರೆಯುತ್ತಿದ್ದವು. 27. ಪ್ರಣಯಿಗಳಿಬ್ಬರೂ ಮಲಗಿದ ಹೊತ್ತು ಜಾವದ ಉಕ್ಕಡಗಳಲ್ಲಿ ಅತ್ತಿತ್ತ ಸುತ್ತುತ್ತಿರುವ ಯಾಮಿಕರಸದ್ದ್ದೆಲ್ಲಾ ಅಡಗಿತು. ಆಗ ಆ ಅರಮನೆಯ ಪಕ್ಕದಲ್ಲಿದ್ದ ಪಟ್ಟದಾನೆಯ ಮಾವುತನು, ತನ್ನ ಸರದಿ ಬಂದಂತೆ ತನ್ನ ಮನಸ್ಸಂತೋಷಕ್ಕಾಗಿ ಹಾಡತೊಡಗಿದನು. 28. ಅವನ ಹಾಡಿನ