೪೯
ಯಶೋಧರ ಚರಿತೆ
ಅಮೃತಮತಿಯೆತ್ತ ರೂಪಾ
ಧಮನಷ್ಟಾವಂಕನೆತ್ತ ಚಿತ್ರಮಪಾತ್ರೇ
ರಮತೇ ನಾರೀ ಎಂಬುದು
ಸಮನಿಸಿದುದು ಬೆಂದ ಬಿದಿಗೆ ಕಣ್ಣಿಲ್ಲಕ್ಕುಂ 34
ಎನುತುಂ ಬಂದು ವಿಷಣ್ಣಾ
ನನೆಯಂ ಮಾರ್ಗಾವಲಗ್ನ ನೇತ್ರೆಯನುಚ್ಛ್ವಾ
ಸ ನಿತಪ್ತಾಧರರುಚಿಯಂ
ಮನುಜೇಂದ್ರಾಂಗನೆಯನೆಯ್ದಿ ಕಂಡಿಂತೆಂದಳ್ 35
ಕಂತುವಿನ ಕಯ್ಯ ಕೂರಸಿ
ಯಂತಿರೆ ಗರಗರಿಕೆವಡೆದು ಪೊಳೆವಸಿಯಳೆ ನೀ
ನಿಂತಪ್ಪ ಕಾಮದೇವಂ
ಗಂತೆಂತಾಯ್ದರಸಿ ಕೂರ್ತೆಯೆಂದಾನರಿಯೆಂ 36
_____
ಹಿಂತಿರುಗಿದಳು. 34. “ಅಯ್ಯೋ ದೇವರೇ ! ಅಮೃತಮತಿಯೆಲ್ಲಿ, ರೂಪಾಧಮನಾದ ಅಷ್ಟಾವಂಕನೆಲ್ಲಿ? ‘ಚಿತ್ರಂ ! ಅಪಾತ್ರೇ ರಮತೇ ನಾರೀ’ [ಆಶ್ಚರ್ಯ ! ಹೆಂಗಸು ಅಯೋಗ್ಯನೊಡನೆ ರಮಿಸುತ್ತಾಳೆ!] ಎಂಬ ಮಾತು ಸಂಭವಿಸಿತಲ್ಲ ! ಆ ಸುಟ್ಟ ವಿಧಿಗೆ ಕಣ್ಣೇ ಇಲ್ಲವೋ!” 35. ಎಂದೆಲ್ಲ ಯೋಚನೆ ಅವಳ ತಲೆಯಲ್ಲಿ ಸುಳಿಯಿತು. ಇದನ್ನೇ ಹೊತ್ತು ಅವಳು ಮರಳಿದಳು. ಇಲ್ಲಿ ನೋಡುವುದೇನು? ಆ ರಾಜೇಂದ್ರನ ಪತ್ನಿ ಅಮೃತಮತಿ ಮುಖ ಬಾಡಿಸಿಕೊಂಡೇ ಇದ್ದಾಳೆ. ತನ್ನ ಗೆಳತಿ ಯಾವಾಗ ಮರಳಿಯಾಳು ಎಂದು ಅವಳು ಬರುವ ದಾರಿಯಲ್ಲೇ ಕಣ್ಣಿಟ್ಟುಕೊಂಡಿದ್ದಾಳೆ. ಬಿಡುವ ಬಿಸಿಯುಸಿರು ತಾಗಿ ತುಟಿಯ ಸಹಜವಾದ ಕೆಂಬಣ್ಣವೆಲ್ಲ ಕಳೆದುಹೋಗಿದೆ. ಹೀಗೆ ಉತ್ಕಂಠಿತೆಯಾಗಿದ್ದ ಒಡತಿಯನ್ನು ಸಮೀಪಿಸಿ ಅವಳು ಹೇಳಿದಳು : 36. “ಕಾಮನ ಕೈಯ ಖಡ್ಗದಂತೆ ಬಹಳ ಚೆಲುವನ್ನು ಪಡೆದು ಶೋಭಿಸುವ ತನುಗಾತ್ರಿ ನೀನು. ಇಂತಹ ನೀನು, ಈ ಬಗೆಯ ಕಾಮದೇವನನ್ನು ಹೇಗೆ ಶೋಧನೆ ಮಾಡಿದೆ!