ವಿಷಯಕ್ಕೆ ಹೋಗು

ಪುಣ್ಯವೆಂದರಿಯೆ, ಪಾಪವೆಂದರಿಯೆ, ಸ್ವರ್ಗವೆಂದರಿಯೆ

ವಿಕಿಸೋರ್ಸ್ದಿಂದ


ಲೇಖಕರು: ಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1191 AD
ಪ್ರಕಾಶಕರು: anubhava mantapa
ಮೂಲ: vachana saahitya

ಪುಣ್ಯವೆಂದರಿಯೆ
ಪಾಪವೆಂದರಿಯೆ
ಸ್ವರ್ಗವೆಂದರಿಯೆ ನರಕವೆಂದರಿಯೆ
ಹರಹರ ಮಹಾದೇವ ಶಿವಶರಣೆಂದು ಶುದ್ಧ ನೋಡಯ್ಯಾ
ಹರಹರ ಮಹಾದೇವ ಶಿವಶರಣೆಂದು ಧನ್ಯ ನೋಡಯ್ಯಾ. ಕೂಡಲಸಂಗಮದೇವಯ್ಯಾ
ನಿಮ್ಮನರ್ಚಿಸಿ
ಪೂಜಿಸಿ ನಿಶ್ಚಿಂತನಾದೆ.