ಪೃಥ್ವಿಯ ಕಠಿಣವ ಕೆಡಿಸಿ,
ಗೋಚರ
ಲೇಖಕರು: ಅಲ್ಲಮ ಪ್ರಭು
ಶೀರ್ಷಿಕೆ: vachana saahitya
ವರ್ಷ: 1120-1160 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಪೃಥ್ವಿಯ ಕಠಿಣವ ಕೆಡಿಸಿ
ಅಪ್ಪುವಿನ ಕೈಕಾಲು ಮುರಿದು
ಅಗ್ನಿಯ ಕಿವಿ ಮೂಗಂ ಕೊಯ್ದು
ವಾಯುವಿನ ಶಿರವರಿದು
ಆಕಾಶವ ಶೂಲದಲ್ಲಿಕ್ಕಿದ ಬಲ್ಲಿದ ತಳವಾರನೀತ ನೋಡಯ್ಯಾ. ಒಂಬತ್ತು ಬಾಗಿಲ ಬೀಗಮಂ ಬಲಿದು ಒಡನೆ ನವಸಹಸ್ರ ಮಂದಿಯ ಕೊಂದುಳಿದ ಗುಹೇಶ್ವರಾ ನಿಮ್ಮ ಶರಣ.