ಭಕ್ತನಾದರೆ ಕಿಂಕಿಲನಾಗಿರಬೇಕು. ಮಾಹೇಶ್ವರನಾದರೆ
ಗೋಚರ
ಲೇಖಕರು: ಚೆನ್ನಬಸವಣ್ಣ
ಶೀರ್ಷಿಕೆ: vachana saahitya
ವರ್ಷ: 1144-1168 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಭಕ್ತನಾದರೆ ಕಿಂಕಿಲನಾಗಿರಬೇಕು. ಮಾಹೇಶ್ವರನಾದರೆ ಆದಿ ಅನಾದಿಯನರಿಯದಿರಬೇಕು. ಪ್ರಸಾದಿಯಾದರೆ ಒಡಲಗುಣವಿರಹಿತನಾಗಿರಬೇಕು. ಪ್ರಾಣಲಿಂಗಿಯಾದರೆ ಪ್ರಸಾದ(ಬಾಹ್ಯವಿಚಾರ?)ವಿಲ್ಲದಿರಬೇಕು. ಶರಣನಾದರೆ ನಿಸ್ಸಂಗಿಯಾಗಿರಬೇಕು. ಐಕ್ಯನಾದರೆ ಬಯಲು ಬಯಲಾಗಿರಬೇಕು. ಇಂತೀ ಸ್ಥಲವನರಿದಲ್ಲದೆ
ಕೂಡಲಚೆನ್ನಸಂಗನಲ್ಲಿ ಸುಸಂವೇದ್ಯನೆಂದೆನಿಸಬಾರದು.