ಭಕ್ತನಾದರೆ ತನುಮನಧನದಾಸೆ ಅಳಿದುಳಿದಿರಬೇಕು.

ವಿಕಿಸೋರ್ಸ್ದಿಂದ



Pages   (key to Page Status)   


ಭಕ್ತನಾದರೆ ತನುಮನಧನದಾಸೆ ಅಳಿದುಳಿದಿರಬೇಕು. ಮಾಹೇಶ್ವರನಾದರೆ ಪರಧನ ಪರಸತಿಯಾಸೆಯಳಿದು ಉಳಿದಿರಬೇಕು. ಪ್ರಸಾದಿಯಾದಡೆ ಪ್ರಸಾದ ಅವಗ್ರಾಹಿಯಾಗಿ
ಪ್ರಸಾದದ ಘಟವಳಿಯದೆ ಉಳಿದಿರಬೇಕು. ಪ್ರಾಣಲಿಂಗಿಯಾದರೆ ಸುಖ-ದುಃಖವ ಮರೆದು ಪ್ರಾಣಲಿಂಗದಲ್ಲಿ ಪರಿಣಾಮಿಯಾಗಿರಬೇಕು. ಶರಣನಾದರೆ ಸತಿಯರ ಸಂಗವ ತೊರೆದು ತಾನು ಲಿಂಗಕ್ಕೆ ಸತಿಯಾಗಿರಬೇಕು_ ಲಿಂಗೈಕ್ಯನಾದರೆ ಲಿಂಗದಲ್ಲಿ ಬೆರಸಿ ಬೇರಿಲ್ಲದಿರಬೇಕು
ಕೂಡಲಚೆನ್ನಸಂಗಯ್ಯಾ.