ಭಕ್ತನಾದರೆ ಭಕ್ತಿಸ್ಥಲವನರಿದು ಅರಿಯದಂತಿರಬೇಕು,

ವಿಕಿಸೋರ್ಸ್ದಿಂದ



Pages   (key to Page Status)   


ಭಕ್ತನಾದರೆ ಭಕ್ತಿಸ್ಥಲವನರಿದು ಅರಿಯದಂತಿರಬೇಕು
ಮಹಾಹೇಶ್ವರನಾದರೆ ನಿಷೆ*ಯ ಕುಳವನರಿದು ಅರಿಯದಂತಿರಬೇಕು
ಪ್ರಸಾದಿಯಾದರೆ ಪ್ರಸಾದಿಸ್ಥಲವನರಿದು ಅರಿಯದಂತಿರಬೇಕು
ಪ್ರಾಣಲಿಂಗಿಯಾದರೆ ಸ್ಥಿತಿ-ಗತಿಯನರಿದು ಅರಿಯದಂತಿರಬೇಕು
ಶರಣನಾದರೆ ಸತಿಪತಿಯೆಂದರಿದು ಅರಿಯದಂತಿರಬೇಕು
ಐಕ್ಯನಾದರೆ ತಾನು ತಾನಾಗಿ ಆಗದಂತಿರಬೇಕು
_ ಇಂತೀ ಷಡುಸ್ಥಲವನರಿಯದೆ ಮಾಡಿದೆನೆಂಬ ಲಜ್ಜೆಗೆಟ್ಟ ಲಾಂಛನಧಾರಿಯನೇನೆಂಬೆ
ಕೂಡಲಚೆನ್ನಸಂಗಮದೇವಾ.