ಭಕ್ತಿ ಜ್ಞಾನ ವೈರಾಗ್ಯ

ವಿಕಿಸೋರ್ಸ್ದಿಂದ



Pages   (key to Page Status)   


ಭಕ್ತಿ ಜ್ಞಾನ ವೈರಾಗ್ಯ ಕುಲಸ್ಥಲವ ಹರಹಲೆಂದು ಮತ್ರ್ಯಲೋಕಕ್ಕೆ ಇಳಿತಂದನಯ್ಯಾ ಬಸವಣ್ಣನು. ವ್ರತಾಚಾರದ ಶಿವಾಚಾರದ ಮುಂದಣ ಕನ್ನಡಕವ ಕಳೆದು ಕರತಳಾಮಳಕ ಮಾಡಿದನಯ್ಯಾ ಬಸವಣ್ಣನು. ಪರವಾದಿ ಬಿಜ್ಜಳನ ಒರೆಗಲ್ಲ ಹಿಡಿದು ಶಿವಭಕ್ತಿಸಂಪಾದನೆಯ ಮಾಡುವಲ್ಲಿ ಮೂವತ್ತಾರು ಕೊಂಡೆಯ ಪರಿಹರಿಸಿ ಶಿವಾಚಾರದ ಧ್ವಜವನೆತ್ತಿ ಮೆರೆದನಯ್ಯಾ ಬಸವಣ್ಣನು_ ಇದು ಕಾರಣ ಕೂಡಲಚೆನ್ನಸಂಗಯ್ಯನಲ್ಲಿ ಬಸವಣ್ಣನ ನಿಲವ ಹೊಗಳುವುದು ಎನ್ನಳವಲ್ಲ
ನಿನ್ನವಳಲ