ಮಂಜರ ದೃಷ್ಟಿಯೊಳಗೆ ಚಂದ್ರಮನುದಯ
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮಂಜರ ದೃಷ್ಟಿಯೊಳಗೆ ಚಂದ್ರಮನುದಯ ನೋಡಾ. ಚಂದ್ರಮಂಡಲನೊಡೆದು ರವಿ ಮೂಡಲು ಮಂಜರ ಸತ್ತಿತ್ತು; ದೃಷ್ಟಿ ನಷ್ಟವಾಯಿತ್ತು. ಚಿಚ್ಚಂದ್ರ ಸೂರ್ಯರೊಂದಾಗಿ ಚಿದಾತ್ಮ ಲಿಂಗವಾದೆನು ನೋಡಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.