ಮನವಿದ್ದಲ್ಲಿಯೇ ನಿಮ್ಮ ನೆನೆಯಬೇಕು.
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮನವಿದ್ದಲ್ಲಿಯೇ ನಿಮ್ಮ ನೆನೆಯಬೇಕು. ಬುದ್ಧಿಯಿದ್ದಲ್ಲಿಯೇ ನಿಮ್ಮ ವಿಚಾರಿಸಬೇಕಯ್ಯ. ಚಿತ್ತವಿದ್ದಲ್ಲಿಯೇ ನಿಮ್ಮ ನಿಶ್ಚಯಿಸಬೇಕು. ಅಹಂಕಾರವಿದ್ದಲ್ಲಿಯೇ ನಿಮ್ಮ ಮಮಕರಿಸಬೇಕಯ್ಯ. ಕಾಯವಿದ್ದಲ್ಲಿಯೇ ಸಾಯದ ಸಂಚವನರಿದು ಎಚ್ಚತ್ತಿರಬೇಕಯ್ಯ. ಜೀವಹಾರಿಯ ಕೆಡೆದು ಭೂಗತವಾಗಿ
ವಾಯುಪ್ರಾಣಿಯಾಗಿ ಹೋಹಾಗ
ಆಗ ಮುಕ್ತಿಯ ಬಯಸಿದರುಂಟೇ? ಚಿತ್ತ ಬುದ್ಧಿ ಅಹಂಕಾರ ಮನ ಜಾÕನ ಭಾವಂಗಳ ಮೀರಿದ
ನಿರ್ಭಾವ ಲಿಂಗೈಕ್ಯನಾದ ನಿರಾಶ್ರಯನಯ್ಯ ಮಾಹೇಶ್ವರನು
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.