Pages (key to Page Status)
ಮನೋಮಧ್ಯದಲ್ಲಿ ಒಂದು ಶಶಿ ಸಂಧಾನದ ಕಳೆ ಸಂದ್ಥಿಸಿ ಅರುಣೋದಯವಾದಂತಿದೆ ಇದೇನಯ್ಯ? ಅದು ಎನ್ನ ಭಾಗ್ಯದಿಂದ ಮತಿಪ್ರಕಾಶನವಾಯಿತ್ತಯ್ಯ. ಆ ಪ್ರಸನ್ನ ಪ್ರಸಾದವನೊಳಕೊಂಡು ಉತ್ತಮೋತ್ತಮವಾಗಿ ನಿಮಗೆ ಸಲುವಳಿಯಾದುದನು ಆರು ಬಲ್ಲರಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.