ಮರಕ್ಕೂ ಕೊಂಬಿಗೂ ಭೇದವುಂಟೇ
ಗೋಚರ
ಲೇಖಕರು: ತೊಂಟದ ಸಿದ್ಧಲಿಂಗೇಶ್ವರ ಶಿವಯೋಗಿಗಳು
ಶೀರ್ಷಿಕೆ: vachana saahitya
ವರ್ಷ: 1550-1600 AD
ಪ್ರಕಾಶಕರು: anubhava mantapa
ಮೂಲ: vachana saahitya
ಪುಟಗಳು: ಇಲ್ಲಿನ ಪುಟಗಳು
ಮರಕ್ಕೂ ಕೊಂಬಿಗೂ ಭೇದವುಂಟೇ ಅಯ್ಯ? ಅಂಗಕ್ಕೂ ಅವಯವಗಳಿಗೂ ಭೇದವುಂಟೇ ಅಯ್ಯ? ಅಂಗದ ಮೇಲೆ ಲಿಂಗವನಿರಿಸಬಹುದು
ಅವಯವಂಗಳ ಮೇಲೆ ಲಿಂಗನಿರಿಸಬಾರದೇಕೆಂಬಿರಯ್ಯ. ಅಂಗವೇ ಶುದ್ಧ
ಅವಯವಂಗಳು ಅಶುದ್ಧವೇ ಮರುಳುಗಳಿರಾ? ಮುಚ್ಚಿಕೊಂಡಿರಿ ಭೋ. ಲಿಂಗ ಪ್ರಸಾದವ ಕೊಂಬ ಶರಣಂಗೆ ಕೈ
ಬಾಯಿ
ಅವಯವಂಗಳೊಳಗೆಲ್ಲವು ಲಿಂಗವೇ ತುಂಬಿಪ್ಪುದು ಕಾಣಿಭೋ. ಈ ಶರಣ ಲಿಂಗದ ಸಮರಸವನಿವರೆತ್ತ ಬಲ್ಲರಯ್ಯಾ
ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.