ಮಾಯೆವಿಡಿದು ಜೀವಿಸುವ ಜೀವಕನಲ್ಲ,

ವಿಕಿಸೋರ್ಸ್ದಿಂದ


Pages   (key to Page Status)   

ಮಾಯೆವಿಡಿದು ಜೀವಿಸುವ ಜೀವಕನಲ್ಲ
ಅದೇನು ಕಾರಣ ಆತ ಘನಲಿಂಗವಿಡಿದು ಜೀವಿಸುವ ಜೀವಕನಾಗಿ. ವಿಷಯವಿಡಿದು ಭುಂಜಿಸುವ ಭುಂಜಕನಲ್ಲ
ಅದೇನು ಕಾರಣ ಆತ ಘನಲಿಂಗವಿಡಿದು ಮಹಾಪ್ರಸಾದ ಭುಂಜಿಸುವ ಭುಂಜಕನಾಗಿ. ವೇಷವಿಡಿದು ರಂಜಿಸುವ ರಂಜಕನಲ್ಲ
ಅದೇನು ಕಾರಣ ಆತ ಸಹಜವಿಡಿದು ರಂಜಿಸುವ ರಂಜಕನಾಗಿ. ಇಂತೀ ತ್ರಿವಿಧ ಒಂದೆಯೆಂದರಿದು ಪರಮಾರ್ಥದಲ್ಲಿ ಚರಿಸುವ ಶರಣಂಗೆ ಶರಣೆನುತಿರ್ದೆನಯ್ಯಾ
ಕೂಡಲಸಂಗಮದೇವಾ.