ಮೇರುಮಂದಿರದಲ್ಲಿ ಈರೈದರತಲೆ, ಧಾರುಣಿಯ

ವಿಕಿಸೋರ್ಸ್ದಿಂದ



Pages   (key to Page Status)   


ಮೇರುಮಂದಿರದಲ್ಲಿ ಈರೈದರತಲೆ
ಧಾರುಣಿಯ ಜನರೆಲ್ಲ ಬಣ್ಣಿಸುತ್ತಿಪ್ಪರು. ಜ್ಞಾನಾಮೃತರಸದಲ್ಲಿ ಓಗರವ ಮಾಡಿ ಆರೋಗಣೆಯ ಮಾಡಿದೆನು. ವಿಷಮಾಕ್ಷ ಹರ ಭಸ್ಮವಿಭೂಷಣ ಶಶಿಧರ ಶರಣು ಶರಣೆನುತಿದ್ದೆನು. ಇಂದ್ರಾಗ್ನಿಯ ಪುರಪಟ್ಟಣದಲ್ಲಿ ಚಂದ್ರಾಹಾರವ (ಚಂದ್ರಹಾರ?) ಬೇಡಿದಡೆ ಖಂಡಕಪಾಲದಲ್ಲಿ ಉಂಡ ತೃಪ್ತಿ
ಅಖಂಡ ನಿರಾಳ ಗುಹೇಶ್ವರ.