ಯಾರಿಗೆ ಯಾರುಂಟು ಎರವಿನ ಸಂಸಾರ

ವಿಕಿಸೋರ್ಸ್ದಿಂದ

ರಚನೆ: ಶ್ರೀ ಪುರಂದರದಾಸರು

ಯಾರಿಗೆ ಯಾರುಂಟು ಎರವಿನ ಸಂಸಾರ
ನೀರ ಮೇಲಣ ಗುಳ್ಳೆ ನಿಜವಲ್ಲ ಹರಿಯೇ || ಪಲ್ಲವಿ ||

ಬಾಯಾರಿತು ಎಂದು ಬಾವಿನೀರಿಗೆ ಪೋದೆ
ಬಾವಿಲಿ ಜಲ ಬತ್ತಿ ಬರಿದಾಯ್ತು ಹರಿಯೆ || ೧ ||

ಬಿಸಿಲು ಗಾಳಿಗಾಗಿ ಮರದ ನೆರಳಿಗೆ ಪೋದೆ
ಮರ ಬಗ್ಗಿ ಶಿರದ ಮೇಲೊರಗಿತೋ ಹರಿಯೆ || ೨ ||

ಅಡವಿಯೊಳ್ಮನೆ ಮಾಡಿ ಗಿಡಕೆ ತೊಟ್ಟಿಲು ಕಟ್ಟಿ
ತೊಟ್ಟಿಲಿನ ಶಿಶು ಮಾಯವಾಯಿತು ಹರಿಯೆ || ೩ ||

ತಂದೆ ಶ್ರೀ ಪುರಂದರವಿಠಲ ನಾರಾಯಣ
ನಾ ಸಾಯೋ ಹೊತ್ತಿಗೆ ನೀ ಕಾಯೋ ಹರಿಯೆ || ೪ ||


ಕನ್ನಡ ವಿಕಿಸೋರ್ಸ್[ಸಂಪಾದಿಸಿ]

ಹಳಗನ್ನಡ ಸಾಹಿತ್ಯ| ಪಂಪಭಾರತ |ಜೈಮಿನಿ ಭಾರತ |ಕುಮಾರವ್ಯಾಸ ಭಾರತ | ನಾಡಗೀತೆಗಳು | ಜನಪದ ಸಾಹಿತ್ಯ | ಚಲನಚಿತ್ರ ಸಾಹಿತ್ಯ | ಚಲನಚಿತ್ರೇತರ ಸಾಹಿತ್ಯ |ಭಾವಗೀತೆಗಳು | ಭಕ್ತಿಗೀತೆಗಳು | ದಾಸ ಸಾಹಿತ್ಯ | ವಚನ ಸಾಹಿತ್ಯ | ತಾತ್ವಿಕ ಸಾಹಿತ್ಯ | ಭಗವದ್ಗೀತೆ |
ಮಂಕುತಿಮ್ಮನ ಕಗ್ಗ | ಶಿಶು ಸಾಹಿತ್ಯ | ಕವನ ಸಂಕಲನಗಳು | ಸಂಪ್ರದಾಯ ಗೀತೆಗಳು |ಮಂಕುತಿಮ್ಮನ ಕಗ್ಗ| |ಸರ್ವಜ್ಞ | ಜೀವನ ಚರಿತ್ರೆ|ಸ್ತೋತ್ರಗಳು|ಸಂಸ್ಕೃತ ಸಾಹಿತ್ಯ