ಯುಕ್ತಿಯ ಕೇಳಿದಡೆ ಭಕ್ತಿಯ

ವಿಕಿಸೋರ್ಸ್ದಿಂದ



Pages   (key to Page Status)   


ಯುಕ್ತಿಯ ಕೇಳಿದಡೆ ಭಕ್ತಿಯ ತೋರಿದ. ಭಕ್ತಿಯ ಕೇಳಿದಡೆ ಯುಕ್ತಿಯ ತೋರಿದ. ನಿತ್ಯವ ಬೆಸಗೊಂಡಡೆ ಅತ್ತತ್ತಲೋಸರಿಸಿದ. ಗುಹೇಶ್ವರನ ಶರಣ ಬಸವಣ್ಣ
ಮರೆಗೆ ಮರೆಯನೊಡ್ಡಿ ಜಾರಿದನು. ಬಸವಣ್ಣನ ಪರಿ ಎಂತು ಹೇಳಾ ಮಡಿವಾಳ ಮಾಚಯ್ಯಾ.