ಲಿಂಗ ಜಂಗಮದ ಪ್ರಸಾದವಲ್ಲದೆ,

ವಿಕಿಸೋರ್ಸ್ದಿಂದ



Pages   (key to Page Status)   

ಲಿಂಗ ಜಂಗಮದ ಪ್ರಸಾದವಲ್ಲದೆ
ಭೂತದ್ರವ್ಯವ ಮುಟ್ಟಬಾರದು
ಶಿಷ್ಟೋದನವಲ್ಲದುದ ಕೊಳ್ಳಬಾರದು. ಅದೆಂತೆಂದಡೆ
ಶೂದ್ರಾನ್ನಂ ಸೂತಕಸ್ಯಾನ್ನಂ ನೈವೇದ್ಯಂ ಶ್ರಾದ್ಧಮೇವ ಚ ಪತಿತಾನ್ನಂ ಸಮೂಹಾನ್ನಂ ರಾಜಾನ್ನಂ ಚೈವ ವರ್ಜಯೇತ್± ಎಂಬೀ ಮನುಸ್ಮøತಿಯಲ್ಲಿ ಹೇಳುವ ಅನ್ನವಾವುವೆಂದೊಡೆ; ಶಿವೋಪದೇಶವಿಲ್ಲದವರಲ್ಲಿಯ[ದು] ಶೂದ್ರಾನ್ನ
ಹೊಲೆಗಳೆವುದಕ್ಕೆ ಮಾಡಿದು[ದು] ಸೂತಕಾನ್ನ
ಸ್ಥಾವರನಿಮಿತ್ತವಾದುನದುಫ ನೈವೇದ್ಯಾನ್ನ
ಪಿತೃಕಾರ್ಯಕ್ಕಾದುದು ಶ್ರಾದ್ಧಾನ್ನ
ಬಲಿಗೆ ಹಾಕಿದುದು ಪತಿತಾನ್ನ
ಪರ್ವಕ್ಕೆ ಮಾಡಿದುದು ಸಮೂಹಾನ್ನ
ಆವುದೊಂದು ಸಿರಿಗರ ಹೊಡೆದಲ್ಲಿ ಪಾಕಭೇದವಾಗಿ ಟೊಂಬರಕ್ಕೆ ಬೇರೆ ಮಾಡಿದುದು ರಾಜಾನ್ನ. ಇಂತೀ ಸಪ್ತವಿಧದನ್ನವ ಬಿಟ್ಟು `ನ ಜಾತಿಭೇದೋ ಲಿಂಗಾರ್ಚೇ ಸರ್ವೇ ರುದ್ರಗಣಾಃ ಸ್ಮೃತಾಃ ಎಂಬುದನರಿದು ಜಾತಿಭೇದವ ಮರೆದು
ಶಿವಭಕ್ತರ ಮನೆಯ ಅನ್ನವ ಶಿವಪ್ರಸಾದವೆಂದು ಕೊಂಡು ಸರ್ವ ಬವರವ ಜಯಸಿದರೆಂಬುದಕ್ಕೆ ಬ್ರಹ್ಮಾಂಡಪುರಾಣೇ; ಆಧಿವ್ಯಾಧಿವಿನಾಶಾಯ ಚರೋಚ್ಚಿಷ್ಟಂ ತು ಸೇವಯೇತ್ ಮಾರ್ಗಾದಿಷು ಚ ಶೈವಾನಾಂ ಚ ಪುಣ್ಯತೀರ್ಥಂ ಸುದರ್ಶನಂ ಎಂದುದಾಗಿ ಶೈವಾದಿಗಳು ಜಂಗಮಪ್ರಸಾದವ ಕೊಂಡು ಮುಕ್ತರಾದರಲ್ಲದೆ
ಜಂಗಮಪ್ರಸಾದದಲ್ಲಿ ವಿಶ್ವಾಸಹೀನರನೇನೆಂಬೆನಯ್ಯಾ ಕೂಡಲಸಂಗಮದೇವಾ