ಪುಟ:ಯಶೋಧರ ಚರಿತೆ.pdf/೭೩

ವಿಕಿಸೋರ್ಸ್ದಿಂದ
ಈ ಪುಟವನ್ನು ಪ್ರಕಟಿಸಲಾಗಿದೆ

ಯಶೋಧರ ಚರಿತೆ

೬೧


ಪೋದಿರುಳಿನ ಕಿತ್ತಡಮಾ
ಮೂದಲೆಯಾಗಿಂತು ನುಡಿದೊರಿಟೆದುದನರಿದಾ
ಪಾದರಿ ಬೇಸತ್ತವೊಲಿರೆ
ಪೋದಂ ಬಗೆ ಕದಡಿ ತಾಯ ಪೊರೆಗೆ ನೃಪೇಂದ್ರಂ೭೦


ಮಗನ ಮೊಗಮಂ ನೀಡುಂ ನೋಡುತ್ತು ಮಳ್ಕರುಳುರ್ಕೆಯಿಂ
ದುಗುವ ಮೊಲೆವಾಲ್‌ ಪುಣ್ಯಸ್ನಾನಾಂಬುವಾಗೆ ಪದಾಬ್ಜದಿಂ
ನೆಗಪಿ ಪಲವಪ್ಪಾ ಶೀರ್ವಾದಂಗಳಿಂದಮರ್ದಪ್ಪಿ ಜೋ
ಲ್ದುಗುವ ಕುರುಳಂ ತಿರ್ದುತ್ತು ಮಿಂತೆದಳಂದಿನ ಭಂಗಿಯಂ೭೧


ಅಭಯರುಚಿಕುಮಾರಂ ಮಾರಿದತ್ತಂಗೆ ಹಿಂಸಾ
ರಭಸಮತಿಗೆ ಸಯ್ಪಂ ಪೇಳ್ದು ಧರ್ಮಕ್ಕೆ ತಂದೀ
ಶುಭಕಥನಮನತ್ಯಾನಂದದಿಂ ಕೇಳ್ವ ಭವ್ಯ
ಪ್ಸರಭು ಸಭೆಗೆಸೆದಿರ್ಕುಂ ಮಂಗಳಂ ಶ್ರೀವಿಲಾಸಂ೭೨


ಮೂದಲೆಯ ಮಾತಾಗಿ ತಿಳಿಸಿದನು. ಜಾರೆಯಾದ ಅಮೃತಮತಿಗೆ ಇದು
ಗೊತ್ತಾಗದಿರಲಿಲ್ಲ. ಆಗ ಅವಳು ಒಮ್ಮೆ ಬೇಸತ್ತಳು. ಚೇತರಿಸಿಕೊಳ್ಳುವಾಗ
ಯಶೋಧರನು ಅಲ್ಲಿರಲಿಲ್ಲ. ಅವನು ಮನಸ್ಸು ಕದಡಿದುದರಿಂದ ಅಲ್ಲಿ ನಿಲ್ಲಲಾರದೆ
ತಾಯಿಯ ಬಳಿಗೆ ತೆರಳಿದ್ದನು. ೭೧.ಮಗನು ಬಂದಾಗ ಚಂದ್ರಮತಿ ಅವನ
ಮುಖವನ್ನೇ ಗಮನವಿಟ್ಟು ನೋಡಿದಳು. ಪುತ್ರವಾತ್ಸಲ್ಯದ ಆಧಿಕ್ಯದಿ೦ದ ಅವಳ
ಮೊಲೆ ಹಾಲು ಉಕ್ಕಿ ಹರಿಯಿತು. ಅದುವೆ ಯಶೋಧರನಿಗೆ ಪವಿತ್ರ ಸ್ನಾನ
ಜಲವಾಯಿತು. ತಾಯಿಯ ಪಾದಗಳಿಗೆರಗಿದ ಮಗನನ್ನು ಮೇಲಕ್ಕೆತ್ತಿ ತಾಯಿ
ಚಂದ್ರಮತಿ ಹಲವು ರೀತಿಯಲ್ಲಿ ಅವನನ್ನು ಹರಸಿದಳು; ಪ್ರೀತಿಯಿಂದ
ಅಪ್ಪಿಕೊಂಡಳು. ಅತ್ತಿತ್ತ ಕೆದರಿಹೋದ ಮುಂಗುರುಳನ್ನು ಹಿಂದಕ್ಕೆ ನೇವರಿಸುತ್ತ
ಅವಳು ಮಗನ ಅಂದಿನ ರೀತಿಯನ್ನು ಆಡಿ ತೋರಿಸಿದಳು. ೭೨. ಹಿಂಸೆಯಲ್ಲೇ
ಮನಸ್ಸು ಮುಂದಾಗುತ್ತಿದ್ದ ಮಾರಿದತ್ತನಿಗೆ ಅಭಯರುಚಿ ಕುಮಾರನು ಸರಿಯಾದ
(ಪುಣ್ಯದ) ವಿಷಯವನ್ನು ಹೇಳಿ, ಅವನನ್ನು ಧರ್ಮದ ದಾರಿಗೆ ತಂದನು.
ಇಂತಹ ಮಂಗಲಕರವಾದ ಕಥೆಯನ್ನು ಅತ್ಯಾನಂದದಿಂದ ಕೇಳುವ ಭವ್ಯಪ್ರಭುಸಭೆಗೆ
ಮಂಗಲ ಸುಪದ್ವಿಲಾಸವು ಶೋಭಿಸುತ್ತದೆ.