ವೇದ ಘನವೆಂಬೆನೆ ?

ವಿಕಿಸೋರ್ಸ್ದಿಂದ



Pages   (key to Page Status)   


ವೇದ ಘನವೆಂಬೆನೆ ? ವೇದ ವೇಧಿಸಲರಿಯದೆ ಕೆಟ್ಟವು. ಶಾಸ್ತ್ರ ಘನವೆಂಬೆನೆ ? ಶಾಸ್ತ್ರ ಸಾಧಿಸಲರಿಯದೆ ಕೆಟ್ಟವು. ಪುರಾಣ ಘನವೆಂಬೆನೆ ? ಪುರಾಣ ಪೂರೈಸಲರಿಯದೆ ಕೆಟ್ಟವು. ಆಗಮ ಘನವೆಂಬೆನೆ ? ಆಗಮ ಅರಸಲರಿಯದೆ ಕೆಟ್ಟವು. ಅದೇನು ಕಾರಣವೆಂದಡೆ: ವೇದ ಶಾಸ್ತ್ರ ಪುರಾಣಾಗಮಂಗಳೆಲ್ಲ
ತಮ್ಮ ತನುವಿಡಿದು ಅರಸಲರಿಯವು. ಇದಿರಿಟ್ಟುಕೊಂಡು ಕಡೆಹೋದ
ನರಲೋಕದ ನರರುಗಳರಿಯರು
ಸುರಲೋಕದ ಸುರರುಗಳರಿಯರು
ಕೂಡಲಚೆನ್ನಸಂಗಮದೇವಾ ನಿಮ್ಮ ಶರಣನೇ ಬಲ್ಲ.