ಶಬ್ದಿಯಾದಾತ ತರುಗಳ ಹೋತ,

ವಿಕಿಸೋರ್ಸ್ದಿಂದ



Pages   (key to Page Status)   


ಶಬ್ದಿಯಾದಾತ ತರುಗಳ ಹೋತ
ನಿಶ್ಶಬ್ದಿಯಾದಾತ ಪಾಷಾಣವ ಹೋತ. ಕೋಪಿಯಾದಾತ ಅಗ್ನಿಯ ಹೋತ
ಶಾಂತನಾದಾತ ಜಲವ ಹೋತ. ಬಲ್ಲೆನೆಂಬಾತ ಇಲ್ಲವೆಯ ಹೋತ
ಅರಿಯೆನೆಂಬಾತ ಪಶುವ ಹೋತ. ಇದು ಕಾರಣ_ಅರಿಯೆನೆನ್ನದೆ ಬಲ್ಲೆನೆನ್ನದೆ ಅರುಹಿನ ಕುರುಹನಳಿದುಳಿದು ಗುಹೇಶ್ವರನೆಂಬ ಲಿಂಗವ ಹೋತವರನಾರನೂ ಕಾಣೆ.