ಶರಣರ ಮನ ನೋಯ

ವಿಕಿಸೋರ್ಸ್ದಿಂದ



Pages   (key to Page Status)   


ಶರಣರ ಮನ ನೋಯ ನುಡಿದೆನಾಗಿ
ಹರಜನ್ಮವಳಿದು ನರಜನ್ಮಕ್ಕೆ ಬಂದೆನು. ಹರನಟ್ಟಿದ ಬೆಸನ ಶಿರದೊಳಗಾಂತೊಡೆ
ಗಿರಿಗಳ ಭಾರವೆನಗಾದುದಯ್ಯ. ಚೆನ್ನಮಲ್ಲಿಕಾರ್ಜುನನ ಧರ್ಮದಿಂದ ಸಂಸಾರ ಕರ್ಮದ ಹೊರೆಯನಿಳುಹಿ
ನಡುದೊರೆಯ ಹಾಯಿದು ಹೋದೆನು.